Updated By: Priyalachhi

ಬೆಂಗಳೂರು: ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದು, ಇದು ರಾಜ್ಯದಲ್ಲಿ ಸಿಎಂ ಹುದ್ದೆಗಾಗಿ ನಡೆಯುತ್ತಿರುವ ಅಧಿಕಾರದ ಜಗಳಕ್ಕೆ ಸಂಬಂಧಿಸಿದ ಊಹಾಪೋಹಗಳಿಗೆ ಕಾರಣವಾಗಿದೆ.

ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಈ ನಡುವೆ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಭೇಟಿಗೆ ಯತ್ನಿಸಿದ್ದಾರೆ. ಆದರೆ ಅದು ಆಗದಿದ್ದಕ್ಕೆ ಬರಿಗೈನಲ್ಲೇ ವಾಪಸ್ ಆಗಿದ್ದಾರೆ. ಇತ್ತ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಗೆ ಡಿಕೆಶಿಗೆ ಆಹ್ವಾನ ಬಂದಿಲ್ಲ. ಬದಲಿಗೆ ಸಿಎಂ ಸಿದ್ದರಾಮಯ್ಯಗೆ ಮಾತ್ರ ಆಹ್ವಾನ ನೀಡಲಾಗಿದೆ. ಹೀಗಾಗಿ ಡಿಸೆಂಬರ್ 26 ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.

ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಕೆಶಿ, ಇಂದು (ಡಿಸೆಂಬರ್ 25) ಬೆಂಗಳೂರಿನಲ್ಲಿ ದಿಢೀರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಮಹತ್ವದ ಚರ್ಚೆ ಮಾಡಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಕೆಶಿವಕುಮಾರ್, ಡಿಸೆಂಬರ್ 27ರಂದು ದೆಹಲಿಯಲ್ಲಿ ಕಾಂಗ್ರೆಸ್​ ಕಾರ್ಯಕಾರಿಣಿ ಸಭೆ ಇದ್ದು, ಸಿಡಬ್ಲ್ಯುಸಿ ಸಭೆಗೆ ನನ್ನನ್ನು ಕರೆದಿಲ್ಲ. ಕರೆದರೆ ನಾನು ಹೋಗುತ್ತೇನೆ. ಸಿಎಂ ಸಿದ್ದರಾಮಯ್ಯರನ್ನು ಸಿಡಬ್ಲ್ಯುಸಿ ಸಭೆಗೆ ಕರೆದ ಮಾಹಿತಿ ಇದ್ದು, ಸಭೆಯಲ್ಲಿ ಭಾಗಿಯಾಗಲು ಸಿಎಂ ದೆಹಲಿಗೆ ಹೋಗುತ್ತಾರೆ ಎಂದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version