BREAKING NEWS
ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •  

—Advertisement—

ಮಹಿಳೆಯರಿಗೆ ಮುಟ್ಟಿನ ರಜೆ ನೀಡುವುದು ಪುರುಷರನ್ನು ಕಡೆಗಣಿಸುತ್ತಿದ್ದೇವೆ ಎಂದರ್ಥವಲ್ಲ: ಡಿಕೆ ಶಿವಕುಮಾರ್

Author Picture
Published On: December 4, 2025

—Advertisement—

Updated By: Priyalachhi

ಬೆಂಗಳೂರು: ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆಯನ್ನು ಕಡ್ಡಾಯಗೊಳಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸರ್ಕಾರವು ಮಹಿಳೆಯರನ್ನು ಬೆಂಬಲಿಸುವ ಮತ್ತು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ನಾವು ಸಮಾನತೆಗೆ ಬದ್ಧರಾಗಿದ್ದೇವೆ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸರ್ಕಾರದ ನೀತಿ. ನಾವು ಸಮಾನತೆಯನ್ನು ಪಾಲಿಸಬೇಕು; ಪುರುಷರು ಮತ್ತು ಮಹಿಳೆಯರ ನಡುವೆ ನಾವು ಯಾವುದೇ ತಾರತಮ್ಯ ಮಾಡಬಾರದು ಎಂದು ನಾನು ಭಾವಿಸುತ್ತೇನೆ. ನಾವು ಇಬ್ಬರನ್ನೂ ಸಮಾಜದಲ್ಲಿ ಒಟ್ಟಿಗೆ ಕರೆದೊಯ್ಯಬೇಕು ಮತ್ತು ಪ್ರಗತಿ ಸಾಧಿಸಬೇಕು. ಇಬ್ಬರೂ ಸಮಾಜದ ಭಾಗ ಎಂದರು.

ವಿವಿಧ ವಲಯಗಳ 18 ರಿಂದ 52 ವರ್ಷ ವಯಸ್ಸಿನ ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು (ವೇತನ ಸಹಿತ) ಕಡ್ಡಾಯಗೊಳಿಸಿ ಸರ್ಕಾರ ಕಳೆದ ತಿಂಗಳು ಆದೇಶ ಹೊರಡಿಸಿತ್ತು. ಇದಕ್ಕೆ ವಿರೋಧ ವ್ಯಕ್ತವಾಗುತ್ತಿರುವ ನಡುವೆಯೇ ಡಿಕೆ ಶಿವಕುಮಾರ್ ಈ ಹೇಳಿಕೆ ನೀಡಿದ್ದಾರೆ.

ಮಹಿಳೆಯರ ಸಾಮರ್ಥ್ಯಗಳನ್ನು ಶ್ಲಾಘಿಸಿದ ಶಿವಕುಮಾರ್, ವಿವಿಧ ಕಾರ್ಯಕ್ರಮಗಳ ಮೂಲಕ ಅವರನ್ನು ಸಬಲೀಕರಣಗೊಳಿಸಲು ಸರ್ಕಾರ ಮಾಡುತ್ತಿರುವ ಪ್ರಯತ್ನಗಳನ್ನು ಎತ್ತಿ ತೋರಿಸಿದರು. ಮಹಿಳಾ ಸಂಘಗಳನ್ನು ಪ್ರೋತ್ಸಾಹಿಸಿದರು ಮತ್ತು ಸರಿಯಾದ ನಿರ್ದೇಶನ ಮತ್ತು ಬೆಂಬಲದೊಂದಿಗೆ ಮಹಿಳೆಯರು ಉತ್ತಮ ಸಾಧನೆ ಮಾಡಲು ಸಮರ್ಥರಾಗಿದ್ದಾರೆ ಎಂದು ಒತ್ತಿ ಹೇಳಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp