Updated By: Priyalachhi

ಬೆಂಗಳೂರು: ವಿಧಾನ ಮಂಡಲ ಅಧಿವೇಶನ ಮುಕ್ತಾಯವಾದ ಬೆನ್ನಲ್ಲೇ ಹಣಕಾಸು ಇಲಾಖೆಯ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಫೆಬ್ರವರಿ 5ರಂದು ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ್ದಾರೆ.

ವಿಧಾನಮಂಡಲ ಜಂಟಿ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಮಾರ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 17ನೇ ಬಾರಿಯ ರಾಜ್ಯ ಬಜೆಟ್ ಮಂಡಿಸಲಿದ್ದು, ಸರ್ಕಾರದ 10 ಇಲಾಖೆಗಳ ಜೊತೆಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಇಂದು ಅರಣ್ಯ, ಕಾನೂನು, ಪ್ರವಾಸೋದ್ಯಮ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ಕಾರ್ಮಿಕ, ಒಳಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ, ಉನ್ನತ ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳನ್ನು ಇಂದಿನ ಸಭೆಗೆ ಕರೆದಿದ್ದಾರೆ.

 

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version