BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

,

ಮೀನು ಉತ್ಪಾದನೆಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ

Author Picture
Published On: November 23, 2025

—Advertisement—

Updated By: Priyalachhi

ಬೆಂಗಳೂರು: ‘ಕರ್ನಾಟಕವು ಈಗ ಮೀನು ಉತ್ಪಾದನೆಯಲ್ಲಿ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಜಾಗತಿಕ ಮೀನು ಉತ್ಪಾದನೆಯಲ್ಲಿ ಭಾರತದ ಪಾಲು ಸುಮಾರು ಶೇ 7.7 ರಷ್ಟಿದ್ದು, ರಫ್ತಿನಲ್ಲಿ ನಾಲ್ಕನೇ ಸ್ಥಾನದಲ್ಲಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.

ವಿಶ್ವ ಮೀನುಗಾರಿಕಾ ದಿನಾಚರಣೆಯಂದು ‘ಮತ್ಸ್ಯ ಮೇಳ 2025’ದಲ್ಲಿ ಮಾತನಾಡಿದ ಅವರು, ಮೀನುಗಾರಿಕೆ ಲಕ್ಷಾಂತರ ಕುಟುಂಬಗಳಿಗೆ ಆಹಾರ ಭದ್ರತೆ, ಪೋಷಣೆ ಮತ್ತು ಜೀವನೋಪಾಯವನ್ನು ಖಾತ್ರಿಪಡಿಸುವ ನಿರ್ಣಾಯಕ ಉದ್ಯಮವಾಗಿದೆ ಎಂದು ಹೇಳಿದರು.

ಕರ್ನಾಟಕವು 32 ಕಿ.ಮೀ ಕರಾವಳಿ ಮತ್ತು 5.5 ಲಕ್ಷ ಹೆಕ್ಟೇರ್ ಒಳನಾಡಿನ ಜಲ ಸಂಪನ್ಮೂಲಗಳನ್ನು ಹೊಂದಿದ್ದು, ಮೀನು ಉತ್ಪಾದನೆಯಲ್ಲಿ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ. ಈ ವಲಯವು ರಾಜ್ಯದಲ್ಲಿ ಸುಮಾರು 10 ಲಕ್ಷ ಜನರಿಗೆ ಆಧಾರವಾಗಿದೆ ಎಂದು ಹೇಳಿದರು.

ಈ ವಲಯಕ್ಕೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ ಅವರು, ಯಾಂತ್ರೀಕೃತ ಮೀನುಗಾರಿಕಾ ದೋಣಿಗಳಿಗೆ ವಾರ್ಷಿಕ ಡೀಸೆಲ್ ಕೋಟಾವನ್ನು 1.5 ಲಕ್ಷ ಕಿಲೋಲೀಟರ್‌ಗಳಿಂದ 2 ಲಕ್ಷ ಕಿಲೋಲೀಟರ್‌ಗಳಿಗೆ ಹೆಚ್ಚಿಸಲಾಗಿದೆ. ಸಾಂಪ್ರದಾಯಿಕ ದೋಣಿಗಳಿಗೆ ಲೀಟರ್‌ಗೆ 35 ರೂ. ಸಬ್ಸಿಡಿ ದರದಲ್ಲಿ ಕೈಗಾರಿಕಾ ಸೀಮೆಎಣ್ಣೆಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp