Updated By: Priyalachhi 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಬಿಎಂ ಮತ್ತಿತರರು ಆರೋಪ ಎದುರಿಸುತ್ತಿರುವ ಮುಡಾ ಭೂಮಿ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದ ಬಿ-ರಿಪೋರ್ಟ್ (ಮುಗಿದ ವರದಿ) ಕುರಿತ ಆದೇಶವನ್ನು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜನವರಿ 22 ಕ್ಕೆ ಕಾಯ್ದಿರಿಸಿದೆ.

ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯ ಮತ್ತಿತರರ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಉಲ್ಲೇಖಿಸಿ ಬಿ-ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ದೂರುದಾರರಾದ ಸ್ನೇಹಮಯಿ ಕೃಷ್ಣ ಪ್ರಶ್ನಿಸಿದ್ದರು.

ಮಂಗಳವಾರ ಈ ಪ್ರಕರಣ ವಿಶೇಷ ನ್ಯಾಯಾಲಯದ ಮುಂದೆ ಬಂದಿತು. ಲೋಕಾಯುಕ್ತ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರಕರಣದ ವಿವರವನ್ನು ಸಲ್ಲಿಸಿದರು.

ತನಿಖಾ ಸಂಸ್ಥೆಯ ಪರವಾಗಿ ವಾದಿಸಿದ ಲೋಕಾಯುಕ್ತ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ವೆಂಕಟೇಶ್ ಅರಬಟ್ಟಿ ಅವರು, ಲೋಕಾಯುಕ್ತ ಪೊಲೀಸರು ಒಟ್ಟು 70 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿದ್ದು, ಈ ಪೈಕಿಯಾರೊಬ್ಬರೂ ಕೂಡ ಮುಖ್ಯಮಂತ್ರಿಗಳು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಅಥವಾ ತನಿಖೆಯ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಹೇಳಿಕೆ ನೀಡಿಲ್ಲ. ತನಿಖಾಧಿಕಾರಿಗಳು ಎಲ್ಲಾ ಆಯಾಮಗಳಿಂದ ಪರಿಶೀಲಿಸಿ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version