• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಮೆಟ್ರೋ ಪ್ರಯಾಣ ದರ ಏರಿಕೆಗೆ ವಿರೋಧ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ

Sambrama Prabha News by Sambrama Prabha News
February 5, 2026
in Politics
0
ಮೆಟ್ರೋ ಪ್ರಯಾಣ ದರ ಏರಿಕೆಗೆ ವಿರೋಧ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ

Updated By: Priyalachhi

ನವದೆಹಲಿ: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯನ್ನು ವಿರೋಧಿಸಿರುವ ಸಂಸದ ತೇಜಸ್ವಿ ಸೂರ್ಯ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಫೆಬ್ರವರಿ 9 ರಿಂದ ಕರ್ನಾಟಕದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆಯನ್ನು ಜಾರಿಗೆ ತಂದಿದ್ದು, ವ್ಯಾಪಕ ಸಾರ್ವಜನಿಕ ವಿರೋಧವನ್ನು ಕಡೆಗಣಿಸಿ ಪ್ರಯಾಣಿಕರ ಮೇಲೆ ಅನಗತ್ಯ ಹೊರೆಯನ್ನು ಹೇರಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ಇಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ಈ ವಿಷಯದ ಬಗ್ಗೆ ಅವರಿಗೆ ತಿಳಿಸಲಾಯಿತು ಮತ್ತು ದರ ನಿಗದಿ ಸಮಿತಿಯನ್ನು ಪುನರ್ರಚಿಸುವಂತೆ ಕೋರಲಾಯಿತು ಎಂದು ತೇಜಸ್ವಿ ಸೂರ್ಯ ಎಕ್ಸ್ ಪೋಸ್ಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಸಮಿತಿಯ ಮುಂದೆ ಇರಿಸಲಾದ ದರ ಲೆಕ್ಕಾಚಾರಗಳಲ್ಲಿನ ಬಹು ವೈಪರೀತ್ಯಗಳನ್ನು ಎತ್ತಿ ತೋರಿಸಲಾಯಿತು, ತಪ್ಪಾದ base year ಬಳಕೆಯಿಂದ ಪ್ರಯಾಣಿಕರಿಂದ ಅಧಿಕ ಶುಲ್ಕ ವಸೂಲಿಯಾಗುತ್ತಿದೆ; ಗರಿಷ್ಠ ದರ ₹95ಕ್ಕೆ ಏರಿಸಲಾಗಿದೆ.

ಈ ದೋಷಪೂರಿತ ದರ ಪರಿಷ್ಕರಣೆ ಜಾರಿಗೆ ಬರಬಾರದು. ವಾರ್ಷಿಕ ದರ ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಅಗತ್ಯವಿದ್ದರೆ ಹೊಸ ಸಮಿತಿಯ ಮೂಲಕ ಸಾರ್ವಜನಿಕ ಹಿತದೃಷ್ಟಿಯಿಂದ ನೂತನ ಮತ್ತು ಕೈಗೆಟಕುವ ದರ ನಿಗದಿಗೆ ಮನವಿ ಮಾಡಿದ್ದೇನೆ.

Tags: ತೇಜಸ್ವಿ ಸೂರ್ಯ
Previous Post

ಸಂಸತ್ ಹೊರಗೆ ನರವಾಣೆ ಆತ್ಮಚರಿತ್ರೆ ಪ್ರದರ್ಶಿಸಿದ Rahul Gandhi

Next Post

ಮಾಲೂರು ಕ್ಷೇತ್ರ: ಮರು ಮತ ಎಣಿಕೆ, ಸುಪ್ರೀಂಕೋರ್ಟ್ ಮಹತ್ವದ ತೀರ್ಪು!

Next Post
ಮಾಲೂರು ಕ್ಷೇತ್ರ: ಮರು ಮತ ಎಣಿಕೆ, ಸುಪ್ರೀಂಕೋರ್ಟ್ ಮಹತ್ವದ ತೀರ್ಪು!

ಮಾಲೂರು ಕ್ಷೇತ್ರ: ಮರು ಮತ ಎಣಿಕೆ, ಸುಪ್ರೀಂಕೋರ್ಟ್ ಮಹತ್ವದ ತೀರ್ಪು!

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.