ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ
ಬೆಂಗಳೂರು: ಮೆಡಿಕಲ್ ಆಕಾಂಕ್ಷಿಗಳಿಗೆ ಸಿಇಟಿ ನಡೆಸಲು ರಾಜ್ಯಗಳಿಗೆ ಅವಕಾಶ ಕೊಡಿ ಎಂದು ಸಿಎಂ ಸಿದ್ದರಾಮಯ್ಯನವರು ಕೇಂದ್ರಕ್ಕೆ ಆಗ್ರಹಿಸಿದ್ದಾರೆ. ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಫ್ರೀಡಂಪಾರ್ಕ್ನಲ್ಲಿ ಯುವ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ, ಒಕ್ಕೂಟ ವ್ಯವಸ್ಥೆ ಎಂಬುದಕ್ಕೆ ಕೇಂದ್ರದಿಂದ ಅರ್ಥ ಹೊರಟೋಗಿದೆ. ಸಿಇಟಿ ಮಾದರಿಯನ್ನು ಕೇಂದ್ರ ಸರ್ಕಾರ ನೀಟ್ ಪರೀಕ್ಷೆಗೆ ಅಳವಡಿಸಿಕೊಳ್ಳಬೇಕು. ಇಲ್ಲವಾದರೆ, ರಾಜ್ಯಗಳಿಗೆ ಸ್ವತಂತ್ರವಾಗಿ ಪರೀಕ್ಷೆ ನಡೆಸಲು ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟರು.
ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಸಿಎಂ ಆಗದ್ದ ಕಾಲದಲ್ಲೇ PSI ಪ್ರಶ್ನೆಪತ್ರಿಕೆ ಸೋರಿಕೆ ಆಯ್ತು. ADGP ಮಟ್ಟದ ಅಧಿಕಾರಿ ಜೈಲಿಗೆ ಹೋದ ನಿದರ್ಶನ ಹಿಂದೆ ಇರಲಿಲ್ಲ. ಬಿಜೆಪಿ ಸರ್ಕಾರದಲ್ಲಿ ಅವ್ಯಾಹತವಾಗಿ ಪ್ರಶ್ನೆಪತ್ರಿಕೆ ಸೋರಿಕೆ ಆಗುತ್ತಿದೆ. ಇದಕ್ಕೆ ಯಾರು ಜವಾಬ್ದಾರಿ? ಜವಾಬ್ದಾರಿ ಹೊರಬೇಕಾದವರು ಮೋದಿ ಎಂದು ಕಿಡಿಕಾರಿದರು.



