• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಮೈಸೂರಿನ ಅರಣ್ಯ ಪ್ರದೇಶಗಳಲ್ಲಿ ಸಫಾರಿ ಚಟುವಟಿಕೆಗಳನ್ನು ಕಡಿಮೆ ಮಾಡಿ

Sambrama Prabha News by Sambrama Prabha News
November 3, 2025
in Latest News, Politics
0
ಮೈಸೂರಿನ ಅರಣ್ಯ ಪ್ರದೇಶಗಳಲ್ಲಿ ಸಫಾರಿ ಚಟುವಟಿಕೆಗಳನ್ನು ಕಡಿಮೆ ಮಾಡಿ

Updated By: Priyalachhi

ಮೈಸೂರು: ಅಕ್ಟೋಬರ್‌ನಲ್ಲಿ ಎರಡು ವಾರಗಳ ಅವಧಿಯಲ್ಲಿ ಮೂವರು ರೈತರು ಸಾವಿಗೀಡಾದ ನಂತರ, ಮೈಸೂರಿನ ಅರಣ್ಯ ಪ್ರದೇಶಗಳಲ್ಲಿ ಸಫಾರಿ ಚಟುವಟಿಕೆಗಳನ್ನು ಕಡಿಮೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ತಿಳಿಸಿದ್ದಾರೆ.

ಅರಣ್ಯ ವಲಯಗಳಲ್ಲಿ ಹೆಚ್ಚುತ್ತಿರುವ ಮಾನವ ಚಟುವಟಿಕೆಯಿಂದಾಗಿ ನೀರು ಮತ್ತು ಆಹಾರವನ್ನು ಅರಸಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿವೆ ಎಂದು ಅವರು ಹೇಳಿದರು.

‘ಇದೇನು ಸಂಭವಿಸಿದೆ ಎಂದರೆ ಅರಣ್ಯ ಪ್ರದೇಶದಲ್ಲಿ ಜನರ ಓಡಾಟ ಹೆಚ್ಚಾಗಿದೆ ಮತ್ತು ರೆಸಾರ್ಟ್‌ಗಳು ಬರುತ್ತಿವೆ. ಇದಲ್ಲದೆ, ಸಫಾರಿ ಚಟುವಟಿಕೆಗಳು ಹೆಚ್ಚಿವೆ- ಅದು ಒಂದು ಕಾರಣ. ಹೀಗಾಗಿ, ಕಾಡು ಪ್ರಾಣಿಗಳು ನೀರು ಮತ್ತು ಆಹಾರವನ್ನು ಅರಸಿ ಹಳ್ಳಿಗಳಿಗೆ ಬರುತ್ತಿವೆ ಎಂದು ಸಿದ್ದರಾಮಯ್ಯ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

‘ನಿನ್ನೆ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆದಿತ್ತು. ಶೀಘ್ರದಲ್ಲೇ ಮತ್ತೊಮ್ಮೆ ಸಭೆ ನಡೆಸುತ್ತೇನೆ. ಅಕ್ರಮ ರೆಸಾರ್ಟ್‌ಗಳ ವಿರುದ್ಧ ನಾವು ಕ್ರಮ ಕೈಗೊಳ್ಳುತ್ತೇವೆ ಮತ್ತು ಕಾಡಿನಲ್ಲಿ ಸಫಾರಿ ಚಟುವಟಿಕೆಗಳನ್ನು ಕಡಿಮೆ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ’ ಎಂದು ಹೇಳಿದರು.

Tags: ಮೈಸೂರಿನ ಅರಣ್ಯ
Previous Post

ಡಿಸಿಎಂ ಸ್ಥಾನ ಕೊಡೋದಾದ್ರೆ ನಾನ್​ ರೆಡಿ ಎಂದ ಸಚಿವ ಜಮೀರ್​ ಅಹ್ಮದ್​ ಖಾನ್

Next Post

2026ರ ಮೇ ವೇಳೆಗೆ ಮೆಟ್ರೋ ಗುಲಾಬಿ ಮಾರ್ಗ ಕಾರ್ಯಾರಂಭ ಮಾಡಲಿದೆ

Next Post
2026ರ ಮೇ ವೇಳೆಗೆ ಮೆಟ್ರೋ ಗುಲಾಬಿ ಮಾರ್ಗ ಕಾರ್ಯಾರಂಭ ಮಾಡಲಿದೆ

2026ರ ಮೇ ವೇಳೆಗೆ ಮೆಟ್ರೋ ಗುಲಾಬಿ ಮಾರ್ಗ ಕಾರ್ಯಾರಂಭ ಮಾಡಲಿದೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.