Updated By: Priyalachhi 

ಮೈಸೂರು: ಮೈಸೂರಿನ ಜಿಲ್ಲಾ ನ್ಯಾಯಾಲಯಕ್ಕೆ ಮಂಗಳವಾರ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಕಲಾಪ ಸ್ಥಗಿತಗೊಳಿಸಿ, ಅಲ್ಲಿದ್ದವರನ್ನು ಹೊರಗೆ ಕಳುಹಿಸಲಾಯಿತು.

ಬಾಂಬ್ ಬೆದರಿಕೆ ನಂತರ, ನ್ಯಾಯಾಂಗ ಅಧಿಕಾರಿಗಳು, ವಕೀಲರು, ದಾವೆದಾರರು ಮತ್ತು ನ್ಯಾಯಾಲಯದ ಸಿಬ್ಬಂದಿಯನ್ನು ಕೋರ್ಟ್ ಆವರಣದಿಂದ ಸ್ಥಳಾಂತರಿಸಲಾಯಿತು ಮತ್ತು ನ್ಯಾಯಾಲಯದ ಕಲಾಪಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಬ್ ನಿಷ್ಕ್ರಿಯ ದಳವು ಸ್ಥಳಕ್ಕೆ ಧಾವಿಸಿದ್ದು, ಆವರಣದಲ್ಲಿ ಸಂಪೂರ್ಣ ಶೋಧ ನಡೆಸುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version