BREAKING NEWS
ಕೇವಲ 39 ಸೆಕೆಂಡುಗಳ ಅಂತರದಲ್ಲಿ 2 ಭೀಕರ ಭೂಕಂಪ: ವೆನೆಜುವೆಲಾದಲ್ಲಿ 10,000ಕ್ಕೂ ಹೆಚ್ಚು ಜನರ ಸಾವಿನ ಶಂಕೆ!   •   “ಕುಮಾರಣ್ಣನ ಪಂಚೆ ಮಾತ್ರ ಸಿಂಪಲ್, ಉಳಿದೆಲ್ಲವೂ ಕಾಸ್ಟ್ಲಿ”: ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ   •   ನಟಿ ಕೃಷಿ ತಾಪಂಡ ಫ್ಲಾಟ್‌ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ: ಸಾವಿಗೂ ಮುನ್ನ ಗೆಳತಿಗೆ ಕಳುಹಿಸಿದ ಕೊನೆಯ ಮೆಸೇಜ್‌ನಲ್ಲೇನಿತ್ತು?   •   ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •  

—Advertisement—

, ,

ಮೋದಿ ಎಲ್ಲಿ ರೋಡ್ ಶೋ ಮಾಡಿದ್ರೂ ಅಲ್ಲಿ ಆ್ಯಂಬುಲೆನ್ಸ್ ಬರುತ್ತೆ: ಸಂತೋಷ್ ಲಾಡ್ ವ್ಯಂಗ್ಯ

Author Picture
Published On: May 14, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ನೀಟ್ ಪರೀಕ್ಷೆ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಸಂತೋಷ್ ಲಾಡ್, ವ್ಯಾಪಂ ಹಗರಣದ ಬಗ್ಗೆ ಸಿನಿಮಾ ಮಾಡುವಂತೆ ಖ್ಯಾತ ಚಿತ್ರ ನಿರ್ದೇಶಕ ಆದಿತ್ಯ ಧರ್ ಅವರಿಗೆ ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂತೋಷ್ ಲಾಡ್, ನಿರ್ದೇಶಕ ಆದಿತ್ಯ ಧರ್ ಅವರು ಈಗಾಗಲೇ ‘ಧುರಂಧರ್’ ಸರಣಿಯ ಸಿನಿಮಾಗಳನ್ನು ಮಾಡಿದ್ದಾರೆ. ನಾನು ಅವರಿಗೆ ಒಂದು ವಿಶೇಷ ಮನವಿ ಮಾಡುತ್ತಿದ್ದೇನೆ. ಅವರು ದಯವಿಟ್ಟು ‘ವ್ಯಾಪಂ’ ಹಗರಣದ ಕುರಿತೂ ಒಂದು ಚಿತ್ರ ನಿರ್ಮಿಸಲಿ.

ಅದೊಂದು ಅತ್ಯಂತ ರೋಚಕವಾದ ಹಗರಣವಾಗಿದ್ದು, ಸಿನಿಮಾ ಮಾಡಲು ಸೂಕ್ತವಾದ ಕಥಾವಸ್ತುವನ್ನು ಹೊಂದಿದೆ ಎಂದು ಚಾಟಿ ಬೀಸಿದದ್ದಾರೆ. ಪರೀಕ್ಷಾ ಅಕ್ರಮಗಳ ವಿಚಾರದಲ್ಲಿ ಕೇಂದ್ರದ ವೈಫಲ್ಯಗಳನ್ನು ಟೀಕಿಸುವ ಭರದಲ್ಲಿ ಸಚಿವರು ಈ ರೀತಿಯಾಗಿ ಸಿನಿಮಾ ವಿಚಾರವನ್ನು ಎಳೆದು ತಂದು ಟಾಂಗ್ ನೀಡಿದ್ದಾರೆ.

ಇನ್ನೂ ಮೋದಿ ರೋಡ್ ಶೋ ಸಂಬಂಧ ವ್ಯಂಗ್ಯವಾಡಿದ ಸಂತೋಷ್ ಲಾಡ್, ಮೋದಿ ಸಾಹೇಬರು ಎಲ್ಲಿ ರೋಡ್ ಶೋ ಮಾಡಿದರೂ ಅಲ್ಲಿ ಆ್ಯಂಬುಲೆನ್ಸ್ ಬರುತ್ತೆ. ಅದು ಹೇಗೆ ತಿಳಿಯುತ್ತದೋ ಗೊತ್ತಾಗುವುದಿಲ್ಲ. ಪ್ರತಿ ರೋಡ್ ಶೋ ವೇಳೆ ಆ್ಯಂಬುಲೆನ್ಸ್ ಬರುತ್ತೆ… ಆವಾಗ ಮೋದಿ ದಾರಿ ಮಾಡಿಕೊಡುತ್ತಾರೆ. ಇದು ಮೊದಲೆ ಪ್ಲಾನ್ ಆಗಿರುತ್ತೆ ಎಂದು ಲೇವಡಿ ಮಾಡಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp