• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜ ಒಡೆಯಲು ಸಾಧ್ಯವಿಲ್ಲ: ವಿಜಯೇಂದ್ರ

Sambrama Prabha News by Sambrama Prabha News
December 21, 2025
in Politics
0
ಯಾವ ಶಕ್ತಿಯಿಂದಲೂ ವೀರಶೈವ ಲಿಂಗಾಯತ ಸಮಾಜ ಒಡೆಯಲು ಸಾಧ್ಯವಿಲ್ಲ: ವಿಜಯೇಂದ್ರ

Updated By: Priyalachhi

ಮಂಡ್ಯ: “ವೀರಶೈವ ಲಿಂಗಾಯತ ಸಮಾಜವನ್ನು ಒಡೆಯುವ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಆದರೆ ಯಾವ ಶಕ್ತಿಯಿಂದಲೂ ಈ ಸಮಾಜವನ್ನು ಒಡೆಯಲು ಸಾಧ್ಯವಿಲ್ಲ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಮಂಡ್ಯದ ಮಳವಳ್ಳಿಯಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯುತ್ತಿದ್ದು, ನಿನ್ನೆ(ಶನಿವಾರ) 5ನೇ ದಿನದ ಮಹೋತ್ಸವಕ್ಕೆ ಚಾಲನೆ ಸಿಕ್ಕಿತು. ಜ್ಯೋತಿ ಬೆಳಗುವ ಮೂಲಕ ಮಹೋತ್ಸವವನ್ನು ಶ್ರೀಗಳು ಉದ್ಘಾಟಿಸಿದರು.

ಬಳಿಕ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ, “ರಾತ್ರಿಯಾದರೂ ಭಕ್ತರು ಇಷ್ಟೊಂದು ಸಂಖ್ಯೆಯಲ್ಲಿ ಕುಳಿತಿರುವುದು ಸಂತಸ ಮೂಡಿಸಿದೆ. ರಾಜ್ಯದಲ್ಲಿ ಕುರ್ಚಿ ಕಾಳಗ ನಡೆಯುತ್ತಿದೆ. ಆದರೆ ಈ ಕಾರ್ಯಕ್ರಮದಲ್ಲಿ ಒಂದು ಕುರ್ಚಿ ಕೂಡ ಖಾಲಿ ಇಲ್ಲ. ಜಗದ್ಗುರುಗಳು ಅನ್ನದಾಸೋಹ, ಅಕ್ಷರದಾಸೋಹ ಮೂಲಕ ಸಮಾಜ ಕಟ್ಟಿದರು. ಆದಿಗುರುಗಳ ಪರಂಪರೆಯನ್ನು ಸುತ್ತೂರು ಶ್ರೀಗಳು ಮುಂದುವರೆಸುತ್ತಿದ್ದಾರೆ. ಜನಸಾಮಾನ್ಯರ ಹೃದಯದಲ್ಲಿ ಸುತ್ತೂರು ಮಠ ಆಧ್ಯಾತ್ಮದ ದೀಪ ಹಚ್ಚಿದೆ. ನೊಂದವರ ಪಾಲಿಗೆ ಅನ್ನ, ಅಕ್ಷರ ನೀಡುತ್ತಿದೆ. ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಎಲ್ಲ ಮಠಗಳಿಗೆ ಅನುದಾನ ನೀಡಿದರು. ಅನುಭವ ಮಂಟಪ ನಿರ್ಮಾಣಕ್ಕೆ ಯಡಿಯೂರಪ್ಪನವರು ಅನುದಾನ ನೀಡಿದ್ದಾರೆ. ಬಸವಣ್ಣನವರ ಸಮ ಸಮಾಜದ ಕನಸು ನನಸಾಗಬೇಕು” ಎಂದರು.

Tags: ವಿಜಯೇಂದ್ರ
Previous Post

ಹಾಲಿ ಶಿಕ್ಷಕರೂ TET ಬರೆಯಬೇಕೆಂಬ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ: ಮಧು ಬಂಗಾರಪ್ಪ

Next Post

ರಾಯಭಾರಿ ಕಚೇರಿ ಬಳಿ ಭದ್ರತಾ ಉಲ್ಲಂಘನೆ: ಬಾಂಗ್ಲಾದೇಶಕ್ಕೆ ಭಾರತ ತಿರುಗೇಟು

Next Post
ರಾಯಭಾರಿ ಕಚೇರಿ ಬಳಿ ಭದ್ರತಾ ಉಲ್ಲಂಘನೆ: ಬಾಂಗ್ಲಾದೇಶಕ್ಕೆ ಭಾರತ ತಿರುಗೇಟು

ರಾಯಭಾರಿ ಕಚೇರಿ ಬಳಿ ಭದ್ರತಾ ಉಲ್ಲಂಘನೆ: ಬಾಂಗ್ಲಾದೇಶಕ್ಕೆ ಭಾರತ ತಿರುಗೇಟು

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.