Updated By: Priyalachhi 

ಬೆಂಗಳೂರು: ಬಜೆಟ್‌ವರೆಗೆ ಏನೂ‌ ಆಗುವುದಿಲ್ಲ. ಅಲ್ಲಿವರೆಗೆ ಏನೂ ಮಾತನಾಡೋಕೆ‌ ಹೋಗಬೇಡಿ. ಮಾರ್ಚ್ 31ರ ವರೆಗೆ ಕಲ್ಪನೆಗಳು ಬೇಡ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.‌

ಬೆಂಗಳೂರಲ್ಲಿಂದು ಮಾತನಾಡಿದ ಅವರು, ರಾಜಕಾರಣದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ.‌ ಬಜೆಟ್‌ವರೆಗೆ ಏನೂ‌ ಆಗದು. ಅಲ್ಲಿಯವರೆಗೆ ಏನೂ ಮಾತನಾಡೋಕೆ‌ ಹೋಗಬೇಡಿ. ಮಾರ್ಚ್ 31ರ ವರೆಗೆ ಕಲ್ಪನೆ ಬೇಡ. ಸಿದ್ದರಾಮಯ್ಯನವರು ಈಗಲೂ ಇರಬೇಕು, 2028ಕ್ಕೂ ಇರಬೇಕು ಅಂತ ಹೇಳಿದ್ದೇನೆ. ಅದರ ಬಗ್ಗೆ ಯಾಕೆ ನೀವು ಹೇಳಲ್ಲ ಎಂದರು.

ಸಿಎಂ ವೈರಾಗ್ಯದ ಮಾತು ವಿಚಾರವಾಗಿ ಪ್ರತಿಕ್ರಿಯಿಸಿ, ಡಿಕೆಶಿ ವೈರಾಗ್ಯದ ಮಾತು ಹೇಳಿಲ್ವಾ?. ಕಾರ್ಯಕರ್ತನಾಗಿ ಇರ್ತೇನೆ ಅಂತ ಹೇಳಿಲ್ವಾ?. ಕಾರ್ಯಕರ್ತ ಪರ್ಮನೆಂಟ್. ರಾಜಕಾರಣ ನಿಂತ ನೀರಲ್ಲ. ಚಲನಶೀಲತೆಯೇ ರಾಜಕಾರಣ. ಇವರಲ್ಲಿ ಯಾರ್ಯಾರು ಏನೇನಾಗ್ತಾರೆ ಗೊತ್ತಿಲ್ಲ. ಈಗಲೇ ಎಲ್ಲವನ್ನೂ ಊಹೆ ಮಾಡೋಕೆ ಆಗಲ್ಲ. ಸಿದ್ದರಾಮಯ್ಯ ಅವರ ಅಭಿಪ್ರಾಯವನ್ನು ಹೈಕಮಾಂಡ್ ಪರಿಗಣಿಸಬಹುದು ಎಂದು ತಿಳಿಸಿದರು.

ಸತೀಶ್ ಜಾರಕಿಹೊಳಿ ಭೇಟಿ ವಿಚಾರಕ್ಕೆ, ರಾಜನಹಳ್ಳಿ ವಾಲ್ಮೀಕಿ ಜಾತ್ರೆ ಇದೆ. ಬಸನಗೌಡ ದದ್ದಲ್ ಅದಕ್ಕೆ ಅಧ್ಯಕ್ಷರು. ಅದರ ಪೂರ್ವಭಾವಿ ತಯಾರಿ ಸಭೆ ಕರೆದಿದ್ದಾರೆ. ಅಲ್ಲಿ ಪ್ರೆಸ್​ಮೀಟ್​ ಕೂಡ ಇದೆ. ಅದಕ್ಕೆ ನಾವೆಲ್ಲರೂ ಹೋಗಬೇಕಿತ್ತು. ಕಾರಣಾಂತರಗಳಿಂದ ಹೋಗೋಕೆ‌ ಆಗಿಲ್ಲ. ಜಾತ್ರೆ ಯಶಸ್ಸಿಗೆ ಎಲ್ಲರೂ ಸಹಕಾರ ಕೊಡಬೇಕು. ಅದಕ್ಕೆ ಭೇಟಿಯಾಗಿದ್ದೆವು ಎಂದು ತಿಳಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version