BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

ರಾಜಶೇಖರ್ ಪೋಸ್ಟ್ ಮಾರ್ಟಂ ಎರಡು ಬಾರಿ ಆಗಿಲ್ಲ ಎಂದು ವೈದ್ಯರೇ ಹೇಳಿದ್ದಾರೆ: ಸಚಿವ ಪರಮೇಶ್ವರ್

Author Picture
Published On: January 6, 2026

—Advertisement—

Updated By: Priyalachhi 

ಬೆಂಗಳೂರು: ಯಾವುದನ್ನೇ ಆಗಲಿ ತಿಳಿದು ಮಾತನಾಡಬೇಕು. ತಿಳಿಯದೇ ಮಾತನಾಡಿದರೆ ಇಂಪ್ಯಾಕ್ಟ್ ಹೆಚ್ಚುತ್ತದೆ. ಸಮಾಜದಲ್ಲಿ ಏನಾಗುತ್ತೆ ಅರಿತು ಮಾತನಾಡಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ವಾಗ್ದಾಳಿ ನಡೆಸಿದರು.‌

ಬಳ್ಳಾರಿ ಘರ್ಷಣೆಯಲ್ಲಿ ಮೃತ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮರಣೋತ್ತರ ಪರೀಕ್ಷೆಯನ್ನು 2 ಬಾರಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಯಾವುದನ್ನೇ ಆಗಲಿ ತಿಳಿದು ಮಾತನಾಡಬೇಕು. ತಿಳಿಯದೇ ಮಾತನಾಡಿದರೆ ಇಂಪ್ಯಾಕ್ಟ್ ಹೆಚ್ಚುತ್ತದೆ. ಸಮಾಜದಲ್ಲಿ ಏನಾಗುತ್ತೆ ಅರಿತು ಮಾತನಾಡಬೇಕು. ಈಗಾಗಲೇ ಡಾಕ್ಟರ್ ಅದರ ಬಗ್ಗೆ ಹೇಳಿದ್ದಾರೆ‌. ಎರಡು ಬಾರಿ ಪೋಸ್ಟ್ ಮಾರ್ಟಂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನ ನಾಯಕರು ನೋಡಿದ್ದಾರಾ?. ನಾನು ವೈದ್ಯರ ಮಾತನ್ನು ಒಪ್ತೇನೆ ಎಂದರು.

ನಾನು ಗೃಹ ಸಚಿವನಾಗಿ ಹೇಳ್ತೇನೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕು?. ಏನು ತೀರ್ಮಾನ ಮಾಡಬೇಕು ಗೊತ್ತಿದೆ. 38 ವರ್ಷದಿಂದ ರಾಜಕೀಯದಲ್ಲಿದ್ದೇನೆ. ನನಗೂ ಅಪಾರ ಅನುಭವವಿದೆ. ಕಾನೂನು ಸುವ್ಯವಸ್ಥೆ ಕಾಪಾಡೋದಕ್ಕೆ ನಾನು ಎಲ್ಲ ರೀತಿಯ ತೀರ್ಮಾನ ಮಾಡಿದ್ದೇನೆ. ಕೇವಲ ಒಂದು ಘಟನೆ ಆಧಾರದ ಮೇಲೆ ಸರ್ಟಿಫಿಕೇಟ್ ಕೊಡೋದಲ್ಲ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಜನಪ್ರಿಯ ಸಿಎಂ ಆಗಿದ್ದಾರೆ: ಅರಸರ ದಾಖಲೆ ಸಿಎಂ ಮುರಿದ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ಜನಪ್ರಿಯ ಸಿಎಂ ಆಗಿದ್ದಾರೆ. ದೇವರಾಜ ಅರಸರ ದಾಖಲೆ ಮುರಿಯುತ್ತಿದ್ದಾರೆ. ಅರಸರು 2,792 ದಿನ ಸಿಎಂ ಆಗಿದ್ದರು. ಅದನ್ನು ಈಗ ಸಿದ್ದರಾಮಯ್ಯ ಅಳಿಸಿದ್ದಾರೆ. ಇವತ್ತಿಗೆ ಆ ದಾಖಲೆ ಸಮವಾಗಿದೆ. ನಾನು ಸಿಎಂ ಅವರನ್ನು ಅಭಿನಂದಿಸುತ್ತೇನೆ. ಸೋನಿಯಾ, ರಾಹುಲ್, ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್ ಅವರು ಈ ದಾಖಲೆ ಮಾಡೋಕೆ ಅವಕಾಶ ಕೊಟ್ಟಿದ್ದಾರೆ. ಅದಕ್ಕಾಗಿ ನಾನು ವರಿಷ್ಠರಿಗೂ ಅಭಿನಂದಿಸುತ್ತೇನೆ ಎಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp