• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ, ಯೆಲ್ಲೋ-ಆರೇಂಜ್ ಅಲರ್ಟ್

Sambrama Prabha News by Sambrama Prabha News
May 20, 2026
in Nation News, Politics
0
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ, ಯೆಲ್ಲೋ-ಆರೇಂಜ್ ಅಲರ್ಟ್

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಇದೇ ಮೇ 26ಕ್ಕೆ ಕೇರಳಕ್ಕೆ ಆಗಮಿಸುವ ಸಾಧ್ಯತೆಯಿದೆ. ಹೀಗಾಗಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಆದ್ರೆ, ಅದಕ್ಕೂ ಮುನ್ನ ಅಂದರೆ  ಮುಂಗಾರು ಆಗಮನಕ್ಕೂ ಮುನ್ನವೇ ರಾಜ್ಯದಲ್ಲಿ ಇಂದಿನಿಂದ (ಮೇ 20)  ಮೇ 22ರವರೆಗೆ  ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಗಾಳಿ (ಗಂಟೆಗೆ 50-60 ಕಿ.ಮೀ) ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ-ಆರೇಂಜ್ ಅಲರ್ಟ್

ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು (ಮೇ20) ಮತ್ತು ಮೇ 21ರಂದು ವೇಳೆಗೆ ಗುಡುಗು ಸಹಿತ ಭಾರಿ ಮಳೆ ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್  ಘೋಷಿಸಲಾಗಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ಉತ್ತರ ಒಳನಾಡು

ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಲಕ್ಷಣಗಳಿವೆ.ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ತಾಪಮಾನವು ಗರಿಷ್ಠ 39°C ನಿಂದ 42°C ವರೆಗೆ ಇರಲಿದ್ದು, ಒಣಹವೆ ಮುಂದುವರಿಯಲಿದೆ. ಆದರೆ ಸಂಜೆ ವೇಳೆ ತಂಪಾದ ಗಾಳಿ ಅಥವಾ ಹಗುರ ಮುಂಗಾರು ಪೂರ್ವ ಮಳೆಯಾಗಬಹುದು.ಮೇ 20 ಮತ್ತು 21ರ ವರೆಗೆ ದಕ್ಷಿಣ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗಂಟೆಗೆ 40-50 ಕಿಲೋಮೀಟರ್ ವೇಗದಲ್ಲಿ ಬೀಸುವ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು 22 ರಿಂದ 24ರವರೆಗೆ ಕರಾವಳಿ ಕರ್ನಾಟಕದ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿಲೋಮೀಟರ್ ವೇಗದಲ್ಲಿ ಬೀಸುವ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

Tags: ಮಳೆ
Previous Post

ನೀಟ್ ಮರುಪರೀಕ್ಷೆ: ಸೋಷಿಯಲ್ ಮೀಡಿಯಾ ಪ್ಲಾಟ್​ಫಾರ್ಮ್​ಗಳೊಂದಿಗೆ ಸಚಿವ ಧರ್ಮೇಂದ್ರ ಪ್ರಧಾನ್ ಸಭೆ

Next Post

ಪ್ರಧಾನಿ ಮೋದಿ, ಅಮಿತ್ ಶಾ ದೇಶದ್ರೋಹಿಗಳು: ರಾಹುಲ್ ಗಾಂಧಿ ಟೀಕೆ

Next Post
ಪ್ರಧಾನಿ ಮೋದಿ, ಅಮಿತ್ ಶಾ ದೇಶದ್ರೋಹಿಗಳು: ರಾಹುಲ್ ಗಾಂಧಿ ಟೀಕೆ

ಪ್ರಧಾನಿ ಮೋದಿ, ಅಮಿತ್ ಶಾ ದೇಶದ್ರೋಹಿಗಳು: ರಾಹುಲ್ ಗಾಂಧಿ ಟೀಕೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.