BREAKING NEWS
ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •  

—Advertisement—

,

ರಾಜ್ಯದಲ್ಲಿ 432 ಜನ ಅಕ್ರಮ ವಲಸಿಗರು ಪತ್ತೆ: 255 ಮಂದಿ ಗಡಿಪಾರು

Author Picture
Published On: January 30, 2026

—Advertisement—

Updated By: Priyalachhi

ಬೆಂಗಳೂರು: ಕಳೆದ ಮೂರು ವರ್ಷಗಳಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳಿಂದ ಅಕ್ರಮವಾಗಿ ರಾಜ್ಯದಲ್ಲಿ ನೆಲೆಯೂರಿದ್ದ 432 ಮಂದಿ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 255 ಮಂದಿಯನ್ನು ಪೊಲೀಸ್ ಇಲಾಖೆ ಗಡಿಪಾರು ಮಾಡಿದೆ.

ನಗರದ ಹೊರವಲಯದಲ್ಲಿ ಅಕ್ರಮವಾಗಿ ನೆಲೆಸಿದ್ದ 53 ಮಂದಿ ಬಾಂಗ್ಲಾದೇಶಿಯರನ್ನು ಇತ್ತೀಚೆಗೆ ಪೊಲೀಸರು ಪತ್ತೆ ಹಚ್ಚಿದ್ದರು. ಅನಧಿಕೃವಾಗಿ ರಾಜಧಾನಿಯಲ್ಲಿ ಬಾಂಗ್ಲಾ ನುಸುಳುಕೋರರ ವಿರುದ್ಧ ವಿಳಂಬವಾಗಿ ಕ್ರಮ ಕೈಗೊಂಡಿರುವ ಬಗ್ಗೆ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿತ್ತು. ಈ ಬೆನ್ನಲ್ಲೇ, ಬಾಂಗ್ಲಾದೇಶ ಸೇರಿ ವಿವಿಧ ದೇಶಗಳಿಂದ ಬಂದು ರಾಜ್ಯದಲ್ಲಿ ಬೀಡುಬಿಟ್ಟಿದ್ದ ಅಕ್ರಮ ವಲಸಿಗರ ಪತ್ತೆ, ಗಡಿಪಾರು ಹಾಗೂ ಈ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ಲುಕ್ ಔಟ್ ನೋಟಿಸ್: ಕಳೆದ ಮೂರು ವರ್ಷಗಳಲ್ಲಿ 432 ಅಕ್ರಮ ವಲಸಿಗರನ್ನು ಪತ್ತೆ ಮಾಡಲಾಗಿದೆ. ಇದರ ಪೈಕಿ 370 ಮಂದಿ ಬಾಂಗ್ಲಾದೇಶದವರಾಗಿದ್ದಾರೆ. ಅಲ್ಲದೆ, ಪಾಕಿಸ್ತಾನದ 16 ಹಾಗೂ ಶ್ರೀಲಂಕಾದ 42 ಮಂದಿ ಇದ್ದಾರೆ. ಮೂರು ವರ್ಷಗಳಲ್ಲಿ 255 ಮಂದಿ ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ. 178 ಜನರನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಇವರ ವಿರುದ್ದ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಕೆಲವರನ್ನು ಡಿಟೆಕ್ಷನ್ ಸೆಂಟರ್​ಗಳಿಗೆ ಕಳುಹಿಸಿದ್ದರೆ, ಇತರ ತಲೆಮರೆಸಿಕೊಂಡಿರುವವರ ವಿರುದ್ಧ ದೇಶವನ್ನು ಬಿಟ್ಟು ಹೋಗದಂತೆ ಲುಕ್ ಔಟ್ ನೋಟಿಸ್ (ಎಲ್​ಓಸಿ) ಹೊರಡಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ನಕಲಿ ಆಧಾರ್ ಕಾರ್ಡ್ ಮಾಡಿಸಿದವರ ವಿರುದ್ಧ ಕೇಸ್: ಅಕ್ರಮ ವಲಸಿಗರನ್ನು ಪತ್ತೆ ಹಚ್ಚಲು ಪೊಲೀಸ್​ ಠಾಣಾ ಮಟ್ಟದಲ್ಲಿ ಪತ್ತೆ ದಳ ರಚಿಸಲಾಗಿದೆ. ಅನುಮಾನಾಸ್ಪದ ವಿದೇಶಿಯರು ಕಂಡುಬಂದರೆ ಪಾಸ್​ಪೋರ್ಟ್ ಹಾಗೂ ವೀಸಾ ಪರಿಶೀಲಿಸಿ, ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಬಾಂಗ್ಲಾದೇಶಿಯರಿಗೆ ನಕಲಿ ಆಧಾರ್ ಕಾರ್ಡ್ ಮಾಡಿಸಿದ ಆರೋಪದ ಮೇಲೆ ಐವರ ವಿರುದ್ಧ ನಾಲ್ಕು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp