Updated By: Priyalachhi

ಬೆಂಗಳೂರು: ಇಂದು ಗುರುವಾರ ಆರಂಭವಾದ ವಿಧಾನಸಭೆಯ ವಿಶೇಷ ಅಧಿವೇಶನದ ವೇಳೆ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರ ಕೊಟ್ಟ ಭಾಷಣ ಓದುವ ಬದಲು ತಾವೇ ಬರೆದು ತಂದ ಭಾಷಣ ಆರಂಭಿಸಿ ಕೇವಲ ಒಂದೇ ವಾಕ್ಯ ಓದಿ ಮುಗಿಸಿ ಹೊರಟ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಕಾಂಗ್ರೆಸ್ ಸದಸ್ಯರು ತೀವ್ರವಾಗಿ ಖಂಡಿಸಿ ಟೀಕಿಸುತ್ತಿದ್ದಾರೆ.

ಅವರು ಹೊರಹೋಗುತ್ತಿದ್ದ ವೇಳೆ ಕಾಂಗ್ರೆಸ್ ನಾಯಕರಾದ ಬಿ ಕೆ ಹರಿಪ್ರಸಾದ್ ಮತ್ತು ಇತರ ಶಾಸಕರು ಅಡ್ಡಿಗಟ್ಟಿರುವುದನ್ನು ಖಂಡಿಸಿರುವ ವಿಪಕ್ಷ ನಾಯಕ ಆರ್ ಅಶೋಕ್, ಇದೊಂದು ‘ಕರಾಳ ದಿನ’ ಎಂದು ಕರೆದಿದ್ದಾರೆ. ವಿಧಾನಸೌಧ ಮುಂದೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನ ಪ್ರಕಾರ ರಾಜ್ಯಪಾಲರು ತಮ್ಮ ಕರ್ತವ್ಯ ನಿರ್ವಹಿಸಿ ಧನ್ಯವಾದ ಹೇಳಿ ಹೊರಟಿದ್ದಾರೆ.

ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ರಾಜ್ಯಪಾಲರು ಸಂವಿಧಾನದ ಅಡಿಯಲ್ಲಿ ಕಾರ್ಯನಿರ್ವಹಿಸಿದ್ದು, ಅವರ ಭಾಷಣವನ್ನು ಓದದೇ ಹೊರಡುವುದಕ್ಕೂ ಅವರಿಗೆ ಅಧಿಕಾರವಿದೆ. ಆದರೆ ಕಾಂಗ್ರೆಸ್ ಪಕ್ಷದವರು ರಾಜ್ಯಪಾಲರನ್ನು ಅಡ್ಡಗಟ್ಟಿ ಅಗೌರವ ತೋರಿಸಿದ್ದು ಗೂಂಡಾಗಿರಿ ಎಂದು ಕಿಡಿಕಾರಿದರು. ಅಧಿವೇಶನವನ್ನು ಕಾಂಗ್ರೆಸ್ ಕರಾಳ ರೀತಿಯಲ್ಲಿ ನಡೆಸಿದೆ ಎಂದು ಆರೋಪಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version