BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ರಾಜ್ಯಪಾಲರಿಗೆ ಕೈ ತೋರಿಸಿ ಮಾತನಾಡುವ ಬದಲು ಕಾಲು ತೋರಿಸಕಾಗುತ್ತಾ: ಬಿ.ಕೆ.ಹರಿಪ್ರಸಾದ್

Author Picture
Published On: January 29, 2026

—Advertisement—

Updated By: Priyalachhi

ಬೆಂಗಳೂರು: ರಾಜ್ಯಪಾಲರ ಭಾಷಣಕ್ಕೆ ಖಂಡನೆ ವ್ಯಕ್ತಪಡಿಸಿದ್ದ ಸಭಾನಾಯಕ ಎನ್.ಎಸ್. ಬೋಸರಾಜ್ ಅವರು ವಿಷಾದ ವ್ಯಕ್ತಪಡಿಸಬೇಕೆಂದು ಒತ್ತಾಯಿಸಿ ವಿಧಾನ ಪರಿಷತ್​ನಲ್ಲಿ ಇಂದೂ ಪ್ರತಿಪಕ್ಷಗಳ ಸದಸ್ಯರು ಸದನದ ಬಾವಿಗಿಳಿದು ಧರಣಿ ಮುಂದುವರೆಸಿದರು.

ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷದ ಸದಸ್ಯರು ಸದನ ಬಾವಿಗಳಿದು ಧರಣಿ ಮುಂದುವರೆಸುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ, ಧರಣಿ ಹಿಂಪಡೆಯುವಂತೆ ಮನವಿ ಮಾಡಿದರು.‌

ಈ ವೇಳೆ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, “ಸಭಾನಾಯಕರು ರಾಜ್ಯಪಾಲರ ಭಾಷಣದ ಮೇಲೆ ಖಂಡನೆ ವ್ಯಕ್ತಪಡಿಸಿದ್ದರು. ಆದರೆ ಸರ್ಕಾರ ವಂದನಾ ನಿರ್ಣಯ ಮಂಡಿಸುತ್ತಿದೆ. ಅವರ ಖಂಡನೆ ವಿಚಾರ ಸದನಕ್ಕೆ ತಪ್ಪು ಸಂದೇಶ ನೀಡುತ್ತಿದೆ. ಈ ಬಗ್ಗೆ ಸರ್ಕಾರ ದ್ವಂದ್ವ ನಿಲುವು ತಳೆದಿತ್ತು. ಇದಾದ ಬಳಿಕ ವಂದನಾ ನಿರ್ಣಯ ಎಂದು ಹೇಳಿತ್ತು. ಹಾಗಾದರೆ ಖಂಡನೆ ಮಾಡಿದ್ದಕ್ಕೆ ಸಭಾನಾಯಕರು ವಿಷಾದ ವ್ಯಕ್ತಪಡಿಸಿದರೆ ಧರಣಿ ಹಿಂಪಡೆಯುತ್ತೇವೆ” ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಎನ್.ಎಸ್​.ಭೋಸರಾಜ್, “ರಾಜ್ಯಪಾಲರ ಭಾಷಣದ ವಂದನಾ ನಿರ್ಣಯವನ್ನು ಸ್ವಾಗತಿಸಲಾಗಿದೆ” ಎಂದರು.

ಇದರಿಂದ ತೃಪ್ತರಾಗದ ಪ್ರತಿಪಕ್ಷ ಸದಸ್ಯರು ಧರಣಿ ಮುಂದುವರೆಸಿದಾಗ ಮಧ್ಯಪ್ರವೇಶಿಸಿದ ಹೊರಟ್ಟಿ, “ರಾಜ್ಯಪಾಲರ ಭಾಷಣದ ವಂದನಾ ನಿರ್ಣಯಕ್ಕೆ ಸ್ವಾಗತ ಎಂದು ಸರ್ಕಾರ ಹೇಳಿದೆ ಎಂದ ಮೇಲೆ ಎಲ್ಲವೂ ಸರಿ ಆಯ್ತು ಎಂದರ್ಥ” ಎಂದು ಹೇಳಿದರು.

ಆಕ್ಷೇಪ ವ್ಯಕ್ತಪಡಿಸಿದ ಛಲವಾದಿ, “ಹೇಗೆ ಆ ರೀತಿ ಅರ್ಥ ಬರುತ್ತೆ?. ಯಾವ ಡಿಕ್ಷನರಿಯಲ್ಲಿದೆ ತೋರಿಸಿ” ಎಂದು ಪ್ರಶ್ನಿಸಿದರು.

ಬಿಜೆಪಿ ಸದಸ್ಯ ಅರುಣ್ ಶಂಕರಮೂರ್ತಿ ಅವರು ಹರಿಪ್ರಸಾದ್ ಅವರನ್ನು ಉದ್ದೇಶಿಸಿ ಮಾತನಾಡಿ, “ರಾಜ್ಯಪಾಲರನ್ನು ಕೈ ತೋರಿಸಿ ಮಾತನಾಡಿರುವುದು ಸರಿಯಲ್ಲ” ಎಂದಿದ್ದಕ್ಕೆ ಪ್ರತಿಕ್ರಿಯಿಸಿದ ಹರಿಪ್ರಸಾದ್, “ಕಾಲು ತೋರಿಸಕಾಗುತ್ತಾ?” ಎಂದು ಕೇಳಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp