Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ರಾಜ್ಯ ಕಾಂಗ್ರೆಸ್‌ನಲ್ಲಿನ ನಾಯಕತ್ವ ಗೊಂದಲ ಎಲ್ಲಿಗೆ ಬಂತು
Politics Nation News

ರಾಜ್ಯ ಕಾಂಗ್ರೆಸ್‌ನಲ್ಲಿನ ನಾಯಕತ್ವ ಗೊಂದಲ ಎಲ್ಲಿಗೆ ಬಂತು

Sambrama Prabha NewsBy Sambrama Prabha NewsMay 18, 2026No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಕರ್ನಾಟಕ (karnataka Congress) ಸಚಿವ ಸಂಪುಟ ಪುನಾರಚನೆ ( cabinet reshuffle) ಹಾಗೂ ನಾಯಕತ್ವ ಬದಲಾವಣೆ ಗೊಂದಲ ಮುಂದುವರೆದಿದೆ. ಇಷ್ಟು ದಿನ ಹೈಕಮಾಂಡ್ ನೋಡೋಣ ನೋಡೋಣ ಎಂದೇ ಮುಂದಕ್ಕೆ ತಳ್ಳುತ್ತಾ ಬಂದಿದೆ. ಆದ್ರೆ, ಇದೀಗ ಕೇರಳ ಚುನಾವಣೆ ಮುಗಿದು ಸರ್ಕಾರ ರಚನೆಯಾಗಿರುವ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿದೆ. ಕೇರಳದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಭಾರೀ ಚರ್ಚೆಗೆ ಗ್ರಾಸವಾಗಿದೆ.

  • ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದ ನಾಯಕತ್ವ ಗೊಂದಲ
  • ಸಂಪುಟ ಪುನಾರಚನೆ ಚರ್ಚೆಗೆ ಕೇರಳಂನಲ್ಲೇ ಸಿದ್ದರಾಮಯ್ಯ ಮನವಿ..?
  • ತುಮಕೂರು ಸಾಧನಾ ಸಮಾವೇಶದ ಸುತ್ತ ರಾಜಕೀಯ
  • ಜಿ. ಪರಮೇಶ್ವರ್ ಸಿಎಂ ಮಾಡಲು ವೇದಿಕೆ ಸಿದ್ಧತೆ?

ಕೇರಳಂನಲ್ಲಿ ಕರ್ನಾಟಕ ಸಂಪುಟ ಪುನಾರಚನೆ ಚರ್ಚೆ

ಕೇರಳಂನಲ್ಲಿ ಇಡೀ ಹೈಕಮಾಂಡ್ ನಾಯಕರೇ ಬೀಡು ಬಿಟ್ಟಿದ್ದು, ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತು ಅಧಿಕೃತ ಚರ್ಚೆ ನಡೆಸಲು ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಬಳಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಬಹಳ ಸಮಯ ಹೈಕಮಾಂಡ್ ನಾಯಕರ ಜೊತೆ ಕಾಲ ಕಳೆದಿರುವುದರಿಂದ ಕೇರಳದಲ್ಲೇ ಕರ್ನಾಟಕದ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಗಳು ನಡೆದಿರಬಹುದು ಮಾತುಗಳು ಕೇಳಿಬರುತ್ತಿವೆ.

ಈ ಮಧ್ಯೆ ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನಾ ಸಮಾವೇಶದ ನೆಪದಲ್ಲಿ ಕೈ ನಾಯಕರ ನಡುವೆ ಹೊಸ ಸಮರ ಶುರುವಾಗಿದೆ. ತುಮಕೂರಿನಲ್ಲಿ ನಡೆಯಲಿರುವ ಸಮಾವೇಶದ ಕುರಿತು ಪಕ್ಷದ ಒಳಗೇ ಪರ,ವಿರೋಧದ ವ್ಯಾಖ್ಯಾನಗಳು ಕೇಳಿಬರುತ್ತಿವೆ. ಹೌದು..ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 3 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಾಳೆ (ಮೇ 19) ತುಮಕೂರಿನಲ್ಲಿ ಬೃಹತ್ ಸಾಧನಾ ಸಮಾವೇಶ ಆಯೋಜಿಸಲಾಗಿದೆ. ಆದರೆ, ತುಮಕೂರಿನಲ್ಲೇ ಈ ಸಮಾವೇಶ ನಡೆಯುತ್ತಿರುವುದರಿಂದ ಜಿ. ಪರಮೇಶ್ವರ್ ಅವರನ್ನು ಮುಂದಿನ ಮುಖ್ಯಮಂತ್ರಿ ಮಾಡಲು ವೇದಿಕೆ ಸಜ್ಜುಗೊಳಿಸಲಾಗುತ್ತಿದೆ ಎಂಬ ವ್ಯಾಖ್ಯಾನಗಳು ಶುರುವಾಗಿವೆ. ಇದಕ್ಕೆ ಪುಷ್ಟಿ ನೀಡುವಂತೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಸಿದ್ದರಾಮಯ್ಯ ಬದಲಾವಣೆಯಾದರೆ ಪರಮೇಶ್ವರ್ ಸಿಎಂ ಆಗಲಿ, ನಾವು ಅದನ್ನೇ ಬಯಸುತ್ತೇವೆ ಎಂದು ಹೇಳಿಕೆ ನೀಡಿ ಹೊಸ ಬಾಂಬ್ ಸಿಡಿಸಿದ್ದಾರೆ.

ಸಿಎಂ ಸ್ಥಾನ ಯಾರ ಮನೆ ಆಸ್ತಿಯೂ ಅಲ್ಲ ಎಂದ ರಾಜಣ್ಣ

2013ರಲ್ಲಿ ಜಿ. ಪರಮೇಶ್ವರ್ ಗೆದ್ದಿದ್ದರೆ ಸಿದ್ದರಾಮಯ್ಯ ಅವರು ಸಿಎಂ ಸ್ಥಾನ ಬಿಟ್ಟುಕೊಡುತ್ತಿದ್ದರಾ ಎಂಬ ಪ್ರಶ್ನೆಗೆ ಕೆ.ಎನ್. ರಾಜಣ್ಣ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಸಿಎಂ ಸ್ಥಾನ ಬಿಟ್ಟುಕೊಡದೇ ಇರಲು ಸಿದ್ದರಾಮಯ್ಯ ಅವರ ಮನೆ ಆಸ್ತಿ ಅಲ್ಲ, ಅದು ಜನರು ಕೊಡುವ ಭಿಕ್ಷೆ ಎಂದು ಹೇಳಿದ್ದಾರೆ. ಸಿಎಂ ಸ್ಥಾನ ಯಾವುದೇ ರಾಜಕಾರಣಿಗಳ ಸ್ವಂತ ಆಸ್ತಿಯಲ್ಲ ಎನ್ನುವ ಮೂಲಕ ಹೈಕಮಾಂಡ್ ಮಟ್ಟದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಗಂಭೀರವಾಗಿರುವುದನ್ನು ಒಪ್ಪಿಕೊಂಡಿದ್ದಾರೆ.

ಶಿವಕುಮಾರ್‌ಗೆ ಟಾಂಗ್ ಕೊಟ್ಟ ರಾಜಣ್ಣ

ಇನ್ನು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಈ ಸ್ಪೋಟಕ ಹೇಳಿಕೆಗಳ ಹಿಂದೆ ದೊಡ್ಡ ರಾಜಕೀಯ ತಂತ್ರಗಾರಿಕೆ ಅಡಗಿದೆ. “ಇದ್ದರೆ ಸಿದ್ದರಾಮಯ್ಯ ಇರಲಿ, ಬದಲಾದರೆ ಪರಮೇಶ್ವರ್ ಆಗಲಿ” ಎಂದು ಹೇಳುವ ಮೂಲಕ, ಕೆ.ಎನ್. ರಾಜಣ್ಣ ಅವರು ಪರೋಕ್ಷವಾಗಿ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವುದು ತಮಗೆ ಇಷ್ಟವಿಲ್ಲ ಎಂಬುದನ್ನು ಮತ್ತೊಮ್ಮೆ ಬಹಿರಂಗವಾಗಿ ಗಟ್ಟಿಯಾಗಿ ಹೇಳಿದ್ದಾರೆ. ಇದು ಕೆಪಿಸಿಸಿ ಅಧ್ಯಕ್ಷರ ಬಣದಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಒಂದು ಕಡೆ ಕೇರಳ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಜೊತೆ ನಾಯಕತ್ವದ ಕುರಿತು ಪ್ರತ್ಯೇಕ ಚರ್ಚೆ ನಡೆಸುತ್ತಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಪರಮೇಶ್ವರ್ ಪರ ಬ್ಯಾಟಿಂಗ್ ಶುರುವಾಗಿದೆ. ಹೈಕಮಾಂಡ್ ನಾಯಕರ ನಡೆ ಹಾಗೂ ತುಮಕೂರಿನ ಸಾಧನಾ ಸಮಾವೇಶದ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಯಾವ ರೀತಿಯ ರಾಜಕೀಯ ಬದಲಾವಣೆಗಳಾಗಲಿವೆ ಎಂಬುದನ್ನು ಕಾದುನೋಡಬೇಕಿದೆ.

ಒಟ್ಟಿನಲ್ಲಿ ಸಂಪುಟ ಪುನಾರಚನೆಗೆ ಏನೋ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಬಹುದು. ಆದ್ರೆ, ಕರ್ನಾಟಕ ಕಾಂಗ್ರೆಸ್​​ನಲ್ಲಿನ ನಾಯಕತ್ವ ಗೊಂದಲ ಇನ್ನೂ ಮುಂದುರೆದಿದ್ದು, ಇದಕ್ಕೆ ಹೈಕಮಾಂಡ್ ಯಾವಾಗ ತೆರೆ ಎಳೆಯಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಕಾಂಗ್ರೆಸ್
Add as Preferred on Google Follow on Google News
Share. WhatsApp Facebook Twitter Telegram
Previous Articleಮುಂದಿನ ಸಿಎಂ ಪರಮೇಶ್ವರ್?: ನಾಯಕತ್ವ ಬದಲಾವಣೆಯ ಸುಳಿವು ನೀಡಿದ ಮಾಜಿ ಸಚಿವ ರಾಜಣ್ಣ
Next Article ಮೇ 20ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

September 13, 2026

ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ: ಅಹಿಂದ ನಾಯಕನಾಗುವ ಆತಂಕವೇ? | Satish Jarkiholi ED Raid

September 9, 2026

ಸತೀಶ್ ಜಾರಕಿಹೊಳಿ ಬೆನ್ನಿಗೆ ನಿಂತ ಡಿಕೆಶಿ, ದಲಿತ ನಾಯಕರ ಬೆಳವಣಿಗೆ ಸಹಿಸುತ್ತಿಲ್ಲ ಎಂದು ಕೇಂದ್ರ ವಿರುದ್ಧ ಕೆಂಡ

September 9, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

DKS 100 Days: 15 ಲಕ್ಷ ಉಚಿತ ಸೈಟ್, ಶಕ್ತಿ ಸ್ಮಾರ್ಟ್ ಕಾರ್ಡ್; ಡಿಕೆಶಿ ಸರ್ಕಾರದ ಬಂಪರ್ ಯೋಜನೆಗಳ ವಿವರ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.