• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ ‘ಭಾರತ ರತ್ನ’: ಡಿ. 17ರಂದು ದೆಹಲಿಯಲ್ಲಿ ಒಕ್ಕಲಿಗ ನಾಯಕರ ಸಭೆ

Sambrama Prabha News by Sambrama Prabha News
December 16, 2025
in Latest News, Nation News
0
ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ ‘ಭಾರತ ರತ್ನ’: ಡಿ. 17ರಂದು ದೆಹಲಿಯಲ್ಲಿ ಒಕ್ಕಲಿಗ ನಾಯಕರ ಸಭೆ

Updated By: Priyalachhi

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ, ಒಕ್ಕಲಿಗ ನಾಯಕತ್ವ ಮತ್ತು ಇತರೆ ಗಣ್ಯರು ಡಿಸೆಂಬರ್ 17 ರಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಕರ್ನಾಟಕ ಸಂಘ ಮತ್ತು ಮೈಸೂರಿನ ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ದಿ ಟ್ರಸ್ಟ್ ಆಯೋಜಿಸಿರುವ ಪದ್ಮವಿಭೂಷಣ ಕುವೆಂಪು ಕುರಿತ ಕಾರ್ಯಾಗಾರದಲ್ಲಿ ಆದಿಚುನಾನಗಿರಿಯ ಶ್ರೀ ನಿರ್ಮಲಾನಂದನಾಥ ಸ್ವಾಮಿಗಳು ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಭಾಗವಹಿಸಲಿದ್ದಾರೆ.

ಕೇಂದ್ರವು ಕುವೆಂಪು ಅವರಿಗೆ ಮರಣೋತ್ತರವಾಗಿ ಭಾರತ ರತ್ನ ನೀಡಬೇಕೆಂದು ಒತ್ತಾಯಿಸುವ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಸಭೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್, ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಎಚ್.ಡಿ.ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ಪ್ರಲ್ಹಾದ್ ಜೋಶಿ, ಮತ್ತು ವಿ.ಸೋಮಣ್ಣ, ಬಿಜೆಪಿ ಸಂಸದರಾದ ಡಾ.ಸಿ.ಎನ್.ಮಂಜುನಾಥ್, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ತೇಜಸ್ವಿ ಸೂರ್ಯ, ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ, ಟಿ.ಬಿ.ಜಯಚಂದ್ರ, ಚಂದ್ರಶೇಖರ ಕಂಬಾರ, ನಾಡೋಜ ಹಂಪ ನಾಗರಾಜಯ್ಯ, ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಮಾಧವ ಕೌಶಿಕ್ ಸೇರಿದಂತೆ ಮತ್ತಿತರರು ಭಾಗವಹಿಸುವ ನಿರೀಕ್ಷೆ ಇದೆ.

Tags: ಭಾರತ ರತ್ನರಾಷ್ಟ್ರಕವಿ ಕುವೆಂಪು
Previous Post

ಧನುರ್ಮಾಸ ಆರಂಭ: ಲಕ್ಷ್ಮಿ ನಾರಾಯಣರ ಅನುಗ್ರಹ ಪಡೆಯುವುದು ಹೇಗೆ?

Next Post

ಬೆಳೆ ವಿಮೆ ಯೋಜನೆ: ರೈತರಿಗೆ ನೀಡಿರುವ ಪರಿಹಾರದ ಬಗ್ಗೆ ಶ್ವೇತಪತ್ರ ಹೊರಡಿಸಿ; ಕೇಂದ್ರ ಸರ್ಕಾರಕ್ಕೆ ಈಶ್ವರ್ ಖಂಡ್ರೆ ಆಗ್ರಹ

Next Post
ಬೆಳೆ ವಿಮೆ ಯೋಜನೆ: ರೈತರಿಗೆ ನೀಡಿರುವ ಪರಿಹಾರದ ಬಗ್ಗೆ ಶ್ವೇತಪತ್ರ ಹೊರಡಿಸಿ; ಕೇಂದ್ರ ಸರ್ಕಾರಕ್ಕೆ ಈಶ್ವರ್ ಖಂಡ್ರೆ ಆಗ್ರಹ

ಬೆಳೆ ವಿಮೆ ಯೋಜನೆ: ರೈತರಿಗೆ ನೀಡಿರುವ ಪರಿಹಾರದ ಬಗ್ಗೆ ಶ್ವೇತಪತ್ರ ಹೊರಡಿಸಿ; ಕೇಂದ್ರ ಸರ್ಕಾರಕ್ಕೆ ಈಶ್ವರ್ ಖಂಡ್ರೆ ಆಗ್ರಹ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.