Updated By: Priyalachhi

ಕಾರವಾರ: ಕಾರವಾರದ ಐ.ಎನ್.ಎಸ್‌ ಕದಂಬ ನೌಕಾನೆಲೆ ಡಾಕ್‌ ನಿಂದ ಐ.ಎನ್‌.ಎಸ್‌ ವಾಗ್ಶಿರ್‌ ಜಲಾಂತರ್ಗಾಮಿ ನೌಕೆಯಲ್ಲಿ ಸಮುದ್ರಯಾನ ನಡೆಸಿದ್ದಾರೆ. ಮಾಜಿ ರಾಷ್ಟ್ರಪತಿ ಡಾ.ಎಪಿಜೆ ಅಬ್ದುಲ್‌ ಕಲಾಂ ನಂತರ ಸಬ್ ಮೇರಿನ್ ನಲ್ಲಿ ಪ್ರಯಾಣಿಸಿದ ಎರಡನೇ ರಾಷ್ಟಪತಿ ದ್ರೌಪದಿ ಮುರ್ಮು ಆಗಿದ್ದಾರೆ.

ಐಎನ್ಎಸ್ ವಾಘಶೀರ್ ಭಾರತೀಯ ನೌಕಾಪಡೆಗೆ ಸೇರಿದ ಆರನೇಯ ಕಲ್ವರಿ-ವರ್ಗದ ಜಲಾಂತರ್ಗಾಮಿ ನೌಕೆಯಾಗಿದೆ. ಇದು ದೇಶದ ಅತ್ಯಂತ ಸುಧಾರಿತ ಜಲಾಂತರ್ಗಾಮಿಯಾಗಿದ್ದು, ‘ಮೇಕ್ ಇನ್ ಇಂಡಿಯಾ’ದ ರಕ್ಷಣಾ ಉಪಕ್ರಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ರಾಷ್ಟ್ರಪತಿಗಳೊಂದಿಗೆ ನೌಕಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ಮತ್ತಿತರರು ಉಪಸ್ಥಿತರಿದ್ದರು. ಆಳ ಸಮುದ್ರದಲ್ಲಿ ನೌಕಾಪಡೆಯು ಎದುರಿಸುವ ಸವಾಲುಗಳು ಮತ್ತು ಜಲಾಂತರ್ಗಾಮಿ ಕಾರ್ಯಾಚರಣೆಗಳ ಸಂಕೀರ್ಣತೆಯನ್ನು ಹತ್ತಿರದಿಂದ ವೀಕ್ಷಿಸಲು ಈ ಭೇಟಿ ಸಹಕಾರಿಯಾಯಿತು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version