Updated By: Priyalachhi

ಬೆಂಗಳೂರು: ಕನ್ನಡ ರಾಷ್ಟ್ರ ಪ್ರಶಸ್ತಿ ವಿಜೇತ ತಿಥಿ ಚಿತ್ರದ ಹೀರೋ ‘ಅಭಿ’ ಈಗ ಏನು ಮಾಡುತ್ತಿದ್ದಾರೆ…? ಅವರ ಕುರಿತ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ.

ಹೌದು.. ಒಂದು ಚಿತ್ರದ ಯಶಸ್ಸು ಅದರ ಪಾತ್ರದಾರಿಗಳ ಜೀವನವನ್ನೇ ಬದಲಿಸುತ್ತದೆ. ತಾನು ನಟಿಸಿದ್ದ ಮೊದಲ ಚಿತ್ರವೇ ರಾಷ್ಟ್ರ ಪ್ರಶಸ್ತಿ ಪಡೆದು ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ತಿಥಿ ಚಿತ್ರದ ನಾಯಕ ಅಭಿಷೇಕ್ ಮತ್ತೆ ಸುದ್ದಿಯಲ್ಲಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ಕನ್ನಡ ಚಿತ್ರದಲ್ಲಿ ಹೀರೊ ಆಗಿ ನಟಿಸಿ ಬಳಿಕ ಬ್ಯಾಕ್ ಟು ಬ್ಯಾಕ್ 2 ಚಿತ್ರಗಳಲ್ಲಿ ನಟಿಸಿದ್ದ ನಾಯಕ ನಟ ಬಳಿಕ ಚಿತ್ರರಂಗದಿಂದ ನಾಪತ್ತೆಯಾಗಿದ್ದರು.

ಕೆಲ ವರ್ಷಗಳ ಬಳಿಕ ಮತ್ತೆ ಕ್ಯಾಮೆರಾ ಕಣ್ಣಿಗೆ ಬಿದ್ದಿರುವ ನಟ ಅಭಿಷೇಕ್ ಸಿನಿಮೇತರ ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ಕನ್ನಡ ಚಿತ್ರದಲ್ಲಿ ಹೀರೊ ಆಗಿ ನಟಿಸಿದ್ದ ಈ ನಟ ಅಭಿಷೇಕ್ ಈಗ ಕೂಲಿ ಕೆಲಸ ಮಾಡುತ್ತಿದ್ದಾರೆ. 3 ಸಿನಿಮಾಗಳಲ್ಲಿ ಹೀರೊ ಆಗಿ ನಟಿಸಿದ್ದ ಅಭಿ ಈಗ ಮರ ಹೊರುವ ಕೆಲಸ ಮಾಡುತ್ತಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version