Updated By: Priyalachhi 

ಮೈಸೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಮೈಸೂರು ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಮಾತುಕತೆ ನಡೆಸಿದರು.

ಮೈಸೂರು ಮಾರ್ಗವಾಗಿ ರಾಹುಲ್ ಗಾಂಧಿಯವರು ಅವರು ತಮಿಳುನಾಡಿನ ಕೂಡಲೂರು ಕಾರ್ಯಕ್ರಮಕ್ಕೆ ಹೋಗಿದ್ದರು. ಬಳಿಕ ಇದೇ ಮಾರ್ಗವಾಗಿ ಬಂದು ಮರಳಿ ದೆಹಲಿಗೆ ಪ್ರಯಾಣ ಬೆಳಸಿದರು.

ರಾಹುಲ್ ಜೊತೆ ಡಿಸಿಎಂ ಮಾತು: ತಮಿಳುನಾಡಿನ ಕೂಡಲೂರು ಕಾರ್ಯಕ್ರಮ ಮುಗಿಸಿ ಸಂಜೆ ವೇಳೆಗೆ ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿ ಅವರ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಲಕಾಲ ಮಾತುಕತೆ ನಡೆಸಿದರು. ದೆಹಲಿಗೆ ತೆರಳುವ ಮುನ್ನ ರಾಹುಲ್ ಗಾಂಧಿ, ಡಿಕೆಶಿ ಇಬ್ಬರೇ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

DCM D. K. Shivakumar felicitated Rahul Gandhi

ರಾಜಕೀಯ ಚರ್ಚೆ ಇಲ್ಲ: ಇಂದು ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ಸ್ವಾಗತ ಕೋರಿದ ನಂತರ ರಾಹುಲ್ ಗಾಂಧಿಯವರು ಕೂಡಲೂರು ಕಾರ್ಯಕ್ರಮಕ್ಕೆ ಹೋಗುತ್ತಿದ್ದಾರೆ. ಸಂಜೆ ಇಲ್ಲಿಯೇ ಬಂದು ದೆಹಲಿಗೆ ಹಿಂದಿರುಗುತ್ತಾರೆ. ಅವರನ್ನು ಕಳಿಸಲು ಬರುತ್ತೇನೆ. ಇಲ್ಲಿ ರಾಹುಲ್ ಗಾಂಧಿ ಜೊತೆ ಯಾವುದೇ ರಾಜಕೀಯ ಚರ್ಚೆ ಆಗಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ನಾಯಕತ್ವ ಬದಲಾವಣೆ ನಮ್ಮಲ್ಲಿ ಚರ್ಚೆ ಇಲ್ಲ, ನಮ್ಮಲ್ಲಿ ಯಾವುದೇ ಗೊಂದಲ ಸಹ ಇಲ್ಲ. ಇದು ಕೇವಲ ಮಾಧ್ಯಮದವರ ಸೃಷ್ಟಿ ಎಂದು ಹೇಳಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version