ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ರೈತರ ಭೂಮಿ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಮುಂದಾಗಿರುವುದನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಈ ಕ್ರಮ ರೈತರಿಗೆ ದ್ರೋಹವಾಗಿದ್ದು, ಸರ್ಕಾರ ರೈತರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ ಪ್ರದೇಶವು ತೆಂಗು, ಮಾವು, ರೇಷ್ಮೆ ಹಾಗೂ ಹಾಲು ಉತ್ಪಾದನೆಗೆ ಹೆಸರುವಾಸಿಯಾದ ಫಲವತ್ತಾದ ಕೃಷಿಭೂಮಿಯಾಗಿದೆ. ಇಂತಹ ಜಮೀನನ್ನು ಸರ್ಕಾರ ಕಬಳಿಸಲು ಯತ್ನಿಸುತ್ತಿದೆ ಎಂದು ದೂರಿದರು.

“ಡಿಸಿಎಂ ಡಿ.ಕೆ. ಶಿವಕುಮಾರ್ ನಡೆಸಿದ ಸಭೆಗಳಲ್ಲಿ ನಕಲಿ ರೈತರನ್ನು ಕರೆಸಿ ಭೂಸ್ವಾಧೀನಕ್ಕೆ ಬೆಂಬಲವಿದೆ ಎಂಬ ಚಿತ್ರಣ ಸೃಷ್ಟಿಸಲಾಗಿದೆ. ಆದರೆ, ನಿಜವಾದ ರೈತರು ತಮ್ಮ ಭೂಮಿಯನ್ನು ಯಾವುದೇ ಕಾರಣಕ್ಕೂ ನೀಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ ಎಂದು ಹೇಳಿದರು.

ಬಿಡದಿ ರೈತರ ಹೋರಾಟಕ್ಕೆ ಬಿಜೆಪಿ ಆರಂಭದಿಂದಲೇ ಬೆಂಬಲ ನೀಡಿದ್ದು, ಮುಂದೆಯೂ ಅವರ ಪರ ನಿಲ್ಲಲಿದೆ ಎಂದು ತಿಳಿಸಿದರು.

ಬೆಂಗಳೂರಿನ ಸುತ್ತಮುತ್ತ ಈಗಾಗಲೇ ಸಾಕಷ್ಟು ಖಾಲಿ ಜಾಗಗಳಿವೆ. ಕೆಂಪೇಗೌಡ ಲೇಔಟ್ ಮತ್ತು ಶಿವರಾಮ ಕಾರಂತ ಲೇಔಟ್‌ಗಳಲ್ಲಿ ಲಕ್ಷಾಂತರ ಫ್ಲ್ಯಾಟ್‌ಗಳು ಮಾರಾಟವಾಗದೆ ಉಳಿದಿರುವಾಗ ಹೊಸ ಟೌನ್‌ಶಿಪ್ ಅಗತ್ಯವೇನಿದೆ ಎಂದು ಪ್ರಶ್ನಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version