• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ: BJP ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

Sambrama Prabha News by Sambrama Prabha News
December 23, 2025
in Crime News, Politics
0
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ: BJP ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ವಜಾ

Updated By: Priyalachhi

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯ ಎಸ್‌ಐಟಿ, ಎಫ್‌ಐಆರ್‌ನಲ್ಲಿ ಹೆಸರಿಸಲಾದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಹೊರತುಪಡಿಸಿ ಇತರ 18 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಈ ಕುರಿತಂತೆ ಪ್ರಕರಣದ ಪ್ರಾಸಿಕ್ಯೂಟರ್‌ ಅಶೋಕ್‌ ಎನ್‌.ನಾಯಕ್‌ ಅವರು ಮ್ಯಾಜಿಸ್ಟ್ರೇಟ್‌ ಕೋರ್ಟ್‌ ನ್ಯಾಯಾಧೀಶ ಕೆ.ಎನ್‌.ಶಿವಕುಮಾರ್ ಅವರಿಗೆ 4,236 ಪುಟಗಳಿರುವ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದರು. ಪ್ರಕರಣದ ಐದನೇ ಆರೋಪಿಯಾಗಿರುವ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿರುವ ಹಿನ್ನೆಲೆ ದೋಷಾರೋಪ ಪಟ್ಟಿಯಿಂದ ಅವರ ಹೆಸರನ್ನು ಹೊರಗಿಡಲಾಗಿದೆ. ಈ ಮಧ್ಯೆ ಭೈರತಿ ಬಸವರಾಜ್ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ A5 ಆಗಿರುವ ಭೈರತಿ ಬಸವರಾಜ್ ಗೆ ಲಿಂಕ್ ಆಗಿರುವ ದಾಖಲೆಗಳನ್ನು ಸಲ್ಲಿಸುವಂತೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಸೂಚಿಸಿದ್ದಾರೆ.

Tags: ಭೈರತಿ ಬಸವರಾಜ್
Previous Post

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋಫಿ ಪಂದ್ಯಕ್ಕಿಲ್ಲ ಅವಕಾಶ

Next Post

ಕಾಂಗ್ರೆಸ್ ಮುಖಂಡ Rahul Gandhi ಗೆ ಕೆಎನ್ ರಾಜಣ್ಣ ಪತ್ರ

Next Post
ಕಾಂಗ್ರೆಸ್ ಮುಖಂಡ Rahul Gandhi ಗೆ ಕೆಎನ್ ರಾಜಣ್ಣ ಪತ್ರ

ಕಾಂಗ್ರೆಸ್ ಮುಖಂಡ Rahul Gandhi ಗೆ ಕೆಎನ್ ರಾಜಣ್ಣ ಪತ್ರ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.