BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

ಲಾಲ್​ಬಾಗ್​ ಫ್ಲವರ್​ ಶೋ ಹೂವುಗಳು ಮರುಬಳಕೆ

Author Picture
Published On: January 24, 2026

—Advertisement—

Updated By: Priyalachhi

ಬೆಂಗಳೂರು: ಗಣರಾಜ್ಯೋತ್ಸವದ ಪ್ರಯುಕ್ತವಾಗಿ ನಗರದ ಸಸ್ಯಕಾಶಿ ಲಾಲ್​ಬಾಗ್​​​​ನಲ್ಲಿ (LalBagh) 216ನೇ ಫಲಪುಷ್ಪ ಪ್ರದರ್ಶನ (Flower Show) ಆಯೋಜಿಸಲಾಗಿದ್ದು. ಈ ಫಲಪುಷ್ಪ ಪ್ರದರ್ಶನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ತೋಟಗಾರಿಕೆ ಇಲಾಖೆ ಈ ಬಾರಿ ರಾಷ್ಟ್ರಕವಿ ಕುವೆಂಪು ಅವರ ಪುತ್ರ, ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಬದುಕು-ಬರಹ ಕುರಿತ ತೇಜಸ್ವಿ-ವಿಸ್ಮಯ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ ನಡೆಸುತ್ತಿದೆ.

ಫಲಪುಷ್ಪ ಪ್ರದರ್ಶನದಲ್ಲಿ 95ಕ್ಕೂ ಹೆಚ್ಚು ವೈವಿಧ್ಯಮಯ ಹಾಗೂ 35 ಲಕ್ಷಕ್ಕೂ ಹೆಚ್ಚು ಹೂಗಳಿಂದ ಅಲಂಕಾರ ಮಾಡಲಾಗಿದೆ. ಈ ನಡುವೆ ಫಲಪುಷ್ಪ ಪ್ರದರ್ಶನದ ನಂತರ ಈ ಹೂಗಳನ್ನು ಏನು ಮಾಡುತ್ತಾರೆ? ಎಂಬ ಪ್ರಶ್ನೆ ಉದ್ಭವಾಗಿದ್ದು, ಇದಕ್ಕೆ ತೋಟಗಾರಿಕೆ ಹೆಚ್ಚುವರಿ ನಿರ್ದೇಶಕ ಎಂ. ಜಗದೀಶ್ ಅವರು ಉತ್ತರ ನೀಡಿದ್ದಾರೆ.

ಈ ಪುಷ್ಪ ಪ್ರದರ್ಶನದಲ್ಲಿ ಬಳಸಲಾದ ಒಟ್ಟು 35 ಲಕ್ಷ ವೈವಿಧ್ಯಮಯ ಹೂವುಗಳಲ್ಲಿ 23 ಲಕ್ಷ ಹೂವುಗಳು ಕುಂಡಗಳಲ್ಲಿ ಬೆಳೆಯುತ್ತವೆ. ಈ ಕುಂಡಗಳಲ್ಲಿ ಬೆಳೆಯುವ ಹೂವುಗಳಿಂದ ಬೀಜಗಳು ಪಕ್ವವಾದಾಗ, ಅವುಗಳನ್ನು ಕೊಯ್ಲು ಮಾಡಲಾಗುತ್ತದೆ, ನಂತರ ಹೊಸ ಕುಂಡಗಳಲ್ಲಿ ಸಸಿಗಳನ್ನು ಬೆಳೆಯಲಾಗುತ್ತದೆ. ಅಲಂಕಾರದಲ್ಲಿ ಬಳಸುವ ಸುಮಾರು ಒಂಬತ್ತು ಲಕ್ಷ ಹೂವುಗಳನ್ನು ಗೊಬ್ಬರವಾಗಿ ಪರಿವರ್ತಿಸಲಾಗುತ್ತದೆ. ಈ ಗೊಬ್ಬರವನ್ನು ಲಾಲ್‌ಬಾಗ್‌ನಲ್ಲಿಯೇ ಕೃಷಿಗೆ ಬಳಸಲಾಗುತ್ತದೆ ಎಂದು ಹೇಳಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp