BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

,

‘ವಂದೇ ಮಾತರಂ’ನ ಮೊದಲ ಎರಡು ಚರಣ ಬಳಸುವ ನಿರ್ಧಾರ ನೆಹರೂ ಒಬ್ಬರದ್ದೇ ಅಲ್ಲ: ಖರ್ಗೆ

Author Picture
Published On: December 9, 2025

—Advertisement—

Updated By: Priyalachhi

ನವದೆಹಲಿ: ‘ವಂದೇ ಮಾತರಂ’ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಜವಾಹರಲಾಲ್ ನೆಹರು ಅವರನ್ನು ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ.

ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ, ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ರಾಷ್ಟ್ರೀಯ ಗೀತೆಯಾಗಿ ಬಳಸುವ ನಿರ್ಧಾರವನ್ನು ಮಹಾತ್ಮ ಗಾಂಧಿ ಮತ್ತು ರವೀಂದ್ರನಾಥ ಟ್ಯಾಗೋರ್‌ರಂತಹ ನಾಯಕರು ಸಾಮೂಹಿಕವಾಗಿ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.

ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಬರೆದ ಹಾಡನ್ನು ಕಾಂಗ್ರೆಸ್ ‘ವಿಭಜಿಸಿದೆ’ ಎಂದು ಆಡಳಿತಾರೂಢ ಬಿಜೆಪಿ ಆರೋಪ ಮಾಡುತ್ತಿದ್ದಂತೆ, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಖರ್ಗೆ,ಕಾಂಗ್ರೆಸ್ ನಾಯಕರು ಯಾವಾಗಲೂ ‘ವಂದೇ ಮಾತರಂ’ ಹಾಡುತ್ತಿದ್ದಾರೆ ಎಂದು ಹೇಳಿದರು.

ಕವಿತೆಯ ಎರಡು ಚರಣಗಳನ್ನು ಮಾತ್ರ ರಾಷ್ಟ್ರೀಯ ಗೀತೆಯಾಗಿ ಬಳಸುವ ನಿರ್ಧಾರದ ಹಿಂದೆ ತುಷ್ಟೀಕರಣ ರಾಜಕೀಯವಿದೆ. ವಂದೇ ಮಾತರಂ ಗೀತೆಗೆ ಕತ್ತರಿ ಹಾಕಿದ್ದು ದೇಶದ ವಿಭಜನೆಗೆ ಕಾರಣವಾಯ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದರು.

ಇಂದು ‘ವಂದೇ ಮಾತರಂ’ ಘೋಷಣೆ ಕೂಗುತ್ತಾ ತಮ್ಮ ಭಾಷಣವನ್ನು ಆರಂಭಿಸಿದ ಖರ್ಗೆ, “ನಾವು ಯಾವಾಗಲೂ ವಂದೇ ಮಾತರಂ ಹಾಡುತ್ತಲೇ ಇದ್ದೇವೆ. ಆದರೆ ವಂದೇ ಮಾತರಂ ಹಾಡದವರು ಈಗ ಅದನ್ನು ಹಾಡಲು ಪ್ರಾರಂಭಿಸಿದ್ದಾರೆ. ಅದು ವಂದೇ ಮಾತರಂನ ಶಕ್ತಿ. ಇದು ರಾಷ್ಟ್ರೀಯ ಹಬ್ಬ, ಚರ್ಚೆಯಲ್ಲ ಎಂದರು.

“1921 ರಲ್ಲಿ ಅಸಹಕಾರ ಚಳುವಳಿ ಪ್ರಾರಂಭವಾದಾಗ, ಕಾಂಗ್ರೆಸ್ ಸದಸ್ಯರು ವಂದೇ ಮಾತರಂ ಜಪಿಸುತ್ತಾ ಜೈಲಿಗೆ ಹೋಗುತ್ತಿದ್ದರು. ನೀವು ಏನು ಮಾಡಿದ್ದೀರಿ? ನೀವು ಬ್ರಿಟಿಷರಿಗಾಗಿ ಕೆಲಸ ಮಾಡುತ್ತಿದ್ದೀರಿ” ಎಂದು ಖರ್ಗೆ ವಾಗ್ದಾಳಿ ನಡೆಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp