• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

‘ವಂದೇ ಮಾತರಂ’ನ ಮೊದಲ ಎರಡು ಚರಣ ಬಳಸುವ ನಿರ್ಧಾರ ನೆಹರೂ ಒಬ್ಬರದ್ದೇ ಅಲ್ಲ: ಖರ್ಗೆ

Sambrama Prabha News by Sambrama Prabha News
December 9, 2025
in Nation News, Politics
0
‘ವಂದೇ ಮಾತರಂ’ನ ಮೊದಲ ಎರಡು ಚರಣ ಬಳಸುವ ನಿರ್ಧಾರ ನೆಹರೂ ಒಬ್ಬರದ್ದೇ ಅಲ್ಲ: ಖರ್ಗೆ

Updated By: Priyalachhi

ನವದೆಹಲಿ: ‘ವಂದೇ ಮಾತರಂ’ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಜವಾಹರಲಾಲ್ ನೆಹರು ಅವರನ್ನು ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದ್ದಾರೆ.

ಇಂದು ರಾಜ್ಯಸಭೆಯಲ್ಲಿ ಮಾತನಾಡಿದ ಖರ್ಗೆ, ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ರಾಷ್ಟ್ರೀಯ ಗೀತೆಯಾಗಿ ಬಳಸುವ ನಿರ್ಧಾರವನ್ನು ಮಹಾತ್ಮ ಗಾಂಧಿ ಮತ್ತು ರವೀಂದ್ರನಾಥ ಟ್ಯಾಗೋರ್‌ರಂತಹ ನಾಯಕರು ಸಾಮೂಹಿಕವಾಗಿ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.

ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಬರೆದ ಹಾಡನ್ನು ಕಾಂಗ್ರೆಸ್ ‘ವಿಭಜಿಸಿದೆ’ ಎಂದು ಆಡಳಿತಾರೂಢ ಬಿಜೆಪಿ ಆರೋಪ ಮಾಡುತ್ತಿದ್ದಂತೆ, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಖರ್ಗೆ,ಕಾಂಗ್ರೆಸ್ ನಾಯಕರು ಯಾವಾಗಲೂ ‘ವಂದೇ ಮಾತರಂ’ ಹಾಡುತ್ತಿದ್ದಾರೆ ಎಂದು ಹೇಳಿದರು.

ಕವಿತೆಯ ಎರಡು ಚರಣಗಳನ್ನು ಮಾತ್ರ ರಾಷ್ಟ್ರೀಯ ಗೀತೆಯಾಗಿ ಬಳಸುವ ನಿರ್ಧಾರದ ಹಿಂದೆ ತುಷ್ಟೀಕರಣ ರಾಜಕೀಯವಿದೆ. ವಂದೇ ಮಾತರಂ ಗೀತೆಗೆ ಕತ್ತರಿ ಹಾಕಿದ್ದು ದೇಶದ ವಿಭಜನೆಗೆ ಕಾರಣವಾಯ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದರು.

ಇಂದು ‘ವಂದೇ ಮಾತರಂ’ ಘೋಷಣೆ ಕೂಗುತ್ತಾ ತಮ್ಮ ಭಾಷಣವನ್ನು ಆರಂಭಿಸಿದ ಖರ್ಗೆ, “ನಾವು ಯಾವಾಗಲೂ ವಂದೇ ಮಾತರಂ ಹಾಡುತ್ತಲೇ ಇದ್ದೇವೆ. ಆದರೆ ವಂದೇ ಮಾತರಂ ಹಾಡದವರು ಈಗ ಅದನ್ನು ಹಾಡಲು ಪ್ರಾರಂಭಿಸಿದ್ದಾರೆ. ಅದು ವಂದೇ ಮಾತರಂನ ಶಕ್ತಿ. ಇದು ರಾಷ್ಟ್ರೀಯ ಹಬ್ಬ, ಚರ್ಚೆಯಲ್ಲ ಎಂದರು.

“1921 ರಲ್ಲಿ ಅಸಹಕಾರ ಚಳುವಳಿ ಪ್ರಾರಂಭವಾದಾಗ, ಕಾಂಗ್ರೆಸ್ ಸದಸ್ಯರು ವಂದೇ ಮಾತರಂ ಜಪಿಸುತ್ತಾ ಜೈಲಿಗೆ ಹೋಗುತ್ತಿದ್ದರು. ನೀವು ಏನು ಮಾಡಿದ್ದೀರಿ? ನೀವು ಬ್ರಿಟಿಷರಿಗಾಗಿ ಕೆಲಸ ಮಾಡುತ್ತಿದ್ದೀರಿ” ಎಂದು ಖರ್ಗೆ ವಾಗ್ದಾಳಿ ನಡೆಸಿದರು.

Tags: ಖರ್ಗೆವಂದೇ ಮಾತರಂ
Previous Post

‘ಸಮಾನ ಭಾರತದ ಕಲ್ಪನೆ RSS ಕಂಗೆಡಿಸಿದೆ’: ಲೋಕಸಭೆಯಲ್ಲಿ ರಾಹುಲ್ ಗಾಂಧಿ ಟೀಕೆ

Next Post

ವಜಾ ಮಾಡಿದ ಸಾಲದ ಮೊತ್ತದಲ್ಲಿ ಎಷ್ಟು ಪಾಲು ಮೋದಿ ಆಪ್ತ ಸ್ನೇಹಿತರ ಕಂಪನಿಗಳಿಗೆ ಸೇರಿದೆ? ಪ್ರಧಾನಿಗಳೇ ಉತ್ತರಿಸುವಿರಾ?

Next Post
ವಜಾ ಮಾಡಿದ ಸಾಲದ ಮೊತ್ತದಲ್ಲಿ ಎಷ್ಟು ಪಾಲು ಮೋದಿ ಆಪ್ತ ಸ್ನೇಹಿತರ ಕಂಪನಿಗಳಿಗೆ ಸೇರಿದೆ? ಪ್ರಧಾನಿಗಳೇ ಉತ್ತರಿಸುವಿರಾ?

ವಜಾ ಮಾಡಿದ ಸಾಲದ ಮೊತ್ತದಲ್ಲಿ ಎಷ್ಟು ಪಾಲು ಮೋದಿ ಆಪ್ತ ಸ್ನೇಹಿತರ ಕಂಪನಿಗಳಿಗೆ ಸೇರಿದೆ? ಪ್ರಧಾನಿಗಳೇ ಉತ್ತರಿಸುವಿರಾ?

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.