BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

,

ವಿಧಾನಸೌಧದ ಟೆರರಿಸ್ಟ್‌ ತುಂಬಾ ಅಪಾಯಕಾರಿ : ಹೆಚ್‌.ಡಿ.ಕುಮಾರಸ್ವಾಮಿ

Author Picture
Published On: November 10, 2025

—Advertisement—

Updated By: Priyalachhi

ಬೆಂಗಳೂರು: ವಿಧಾನಸೌಧದ ಲ್ಲಿರುವ ಟೆರರಿಸ್ಟ್‌ಗೂ ಪರಪನ ಅಗ್ರಹಾರದಲ್ಲಿ ರುವ ಟೆರರಿಸ್ಟ್‌ಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಟೆರರಿಸ್ಟ್‌ ಯಾರೆಂದು ನನ್ನಗಿಂತ ಮಾಧ್ಯಮದವರಿಗೆೆ ಚೆನ್ನಾಗಿ ಗೊತ್ತಿದೆ. ವಿಧಾನಸೌಧದಲ್ಲಿರುವ ಟೆರರಿಸ್ಟ್‌ ಇವರಿಗಿಂತ ತುಂಬಾ ಅಪಾಯಕಾರಿ. ಈ ಬಗ್ಗೆ ಜನರು ಮಾತನಾಡುತ್ತಾರೆ ಎಂದರು.

ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಜೈಲಿನಲ್ಲಿ ಸೌಲಭ್ಯ ನೀಡಿರುವ ಬಗ್ಗೆ ಚರ್ಚೆ ಆಗುತ್ತಿದ್ದು, ಇದು ಏನು ಹೊಸದಾಗಿ ಶುರುವಾಗಿಲ್ಲ. ಈ ಹಿಂದೆ ಹಿರಿಯ ಅಧಿಕಾರಿಗಳ ವಿಚಾರದಲ್ಲಿ ಘರ್ಷಣೆ ಆಗಿತ್ತು. ಅಧಿಕಾರಿಗಳ ನಡುವೆಯೇ ರಾಜಕಾರಣ ನಡೆಯುತ್ತಿದೆ. ಗೃಹ ಸಚಿವರು ಏನು ತನಿಖೆ ಮಾಡುತ್ತಾರೆ? ಎಂದು ಪ್ರಶ್ನಿಸಿದರು. ಮಾಧ್ಯಮಗಳು ಅಲ್ಲಿ ದೊರಕಿರುವ ಸೌಲಭ್ಯಗಳ ಬಗ್ಗೆ ತೋರಿಸಿವೆ. ಈಗ ಮತ್ತೆ ತನಿಖೆ ಮಾಡಿ ಏನು ಮಾಡುತ್ತೀರಾ? ಸುಮನೇ ಕಾಲ ಹರಣ ಮಾಡುತ್ತೀರಾ ಎಂದ ಅವರು, ಇದೆಲ್ಲಕ್ಕೂ ಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನೇ ಕೇಳಬೇಕು. ಆಡಳಿತ ವೈಫಲ್ಯ ಸರ್ಕಾರದಲ್ಲಿ ಎದ್ದು ಕಾಣುತ್ತಿದೆ ಎಂದರು.

ಮುಖ್ಯಮಂತ್ರಿಗಳು ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ಹೇಳಿದ್ದರೂ, ಈಗ ನಿಮಗೆ ಇದೆಯೇ? ಮಾಹಿತಿ ತಗೊಂಡು ಮುಖ್ಯಮಂತ್ರಿ ಮಾತನಾಡುತ್ತಾರಂತೆ. ಇವರಿಗೆ ಇಂಟಲಿಜೆನ್‌್ಸ ಇರಲ್ವಾ? ಎಂದು ಪ್ರಶ್ನಿಸಿದರು. ಒತ್ತಡ ಹಾಕಿದ ತಕ್ಷಣ ರಾಜೀನಾಮೆ ಕೊಡುವ ಕಾಲವೇ ಇದು? ಅಷ್ಟೊಂದು ನೈತಿಕತೆ ಯಾವ ರಾಜಕಾರಣಿಗಳಿಗೆ ಇದೆ? ಎಂದು ಗೃಹ ಸಚಿವರ ರಾಜೀನಾಮೆ ವಿಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.

ವಿಮಾನ ನಿಲ್ದಾಣದಲ್ಲಿ ನಮಾಜ್‌ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರು ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದಿದೆ. ಅನೇಕ ಜನರು ಬರುತ್ತಾರೆ. ಬೇರೆ ದೇಶದಲ್ಲಿ ಪ್ರತ್ಯೇಕ ಕೊಠಡಿ ಕೊಡುತ್ತಾರೆ. ಇಲ್ಲಿ ಹಲವಾರು ಧರ್ಮದ ಜನರು ಬರುತ್ತಾರೆ. ಅವರವರ ಧರ್ಮ ಅವರು ಪಾಲಿಸಬೇಕು. ನಾವು ಸಣ್ಣತನ ತೋರೋದಲ್ಲ, ಅವರಿಗೊಂದು ಕೊಠಡಿ ಮಾಡಿಕೊಡಬೇಕು ಎಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp