• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ಈಗ ನನ್ನ ಮಾತು ನಿಜವಾಗಿದೆ – ಯಡಿಯೂರಪ್ಪ

Sambrama Prabha News by Sambrama Prabha News
April 17, 2026
in Politics
0
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ಈಗ ನನ್ನ ಮಾತು ನಿಜವಾಗಿದೆ – ಯಡಿಯೂರಪ್ಪ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಚಿಕ್ಕಮಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಶುಕ್ರವಾರ ತೀರ್ಪು ನೀಡಿದೆ.

ಇಂದು ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್​​. ಯಡಿಯೂರಪ್ಪ ಅವರು, ನಾನು ಅವತ್ತೇ ಹೇಳಿದ್ದೆ. ನಾನು ಆಡಿದ ಮಾತು ಈಗ ಸತ್ಯವಾಗಿದೆ ಎಂದಿದ್ದಾರೆ. ಯೋಗೀಶ್ ಗೌಡ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ಹೇಳಿದ್ದಾರೆ.

ಆರಂಭದಲ್ಲಿ ಸ್ಥಳೀಯ ಪೊಲೀಸರು, ಜಮೀನು ವಿವಾದದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಹೇಳಿದ್ದರು. ನಂತರ ಯೋಗೀಶ್ ಗೌಡ ಕುಟುಂಬದ ಒತ್ತಾಯದ ಮೇರೆಗೆ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಅಂದಿನ ಬಿಜೆಪಿ ಸರ್ಕಾರವು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು.

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಮತ್ತು ಇತರರಿಗೆ ಕ್ರಿಮಿನಲ್ ಪಿತೂರಿ ಹಾಗೂ ಕೊಲೆ ಸೇರಿದಂತೆ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ ಯೋಗೇಶ್ ಗೌಡ ಅವರ ಮಕ್ಕಳಿಗೆ ಪರಿಹಾರವಾಗಿ 16 ಲಕ್ಷ ರೂಪಾಯಿ ನೀಡುವಂತೆ ಕೋರ್ಟ್ ಸೂಚಿಸಿದೆ.

Tags: ಯಡಿಯೂರಪ್ಪ
Previous Post

ಕೆಲ ‘ಒತ್ತಡ’ಗಳಿಂದಾಗಿ Siddaramaiah ‘ಅಸಹಾಯಕ ಪರಿಸ್ಥಿತಿ’ಯಲ್ಲಿದ್ದಾರೆ: ಕಾಂಗ್ರೆಸ್ ಶಾಸಕ KN Rajanna ಹೊಸ ಬಾಂಬ್!

Next Post

ಸಂಪುಟ ಪುನಾರಚನೆ ಸರ್ಕಸ್: ಸಿದ್ದರಾಮಯ್ಯ ಕಾರ್ಯ ವೈಖರಿ ಬಗ್ಗೆ ಖರ್ಗೆ ಅಸಮಾಧಾನ!

Next Post
ಸಂಪುಟ ಪುನಾರಚನೆ ಸರ್ಕಸ್: ಸಿದ್ದರಾಮಯ್ಯ ಕಾರ್ಯ ವೈಖರಿ ಬಗ್ಗೆ ಖರ್ಗೆ ಅಸಮಾಧಾನ!

ಸಂಪುಟ ಪುನಾರಚನೆ ಸರ್ಕಸ್: ಸಿದ್ದರಾಮಯ್ಯ ಕಾರ್ಯ ವೈಖರಿ ಬಗ್ಗೆ ಖರ್ಗೆ ಅಸಮಾಧಾನ!

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.