ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಹೈಕೋರ್ಟ್ ನಿರ್ದೇಶನದ ನಂತರ, ಎಲ್ಲಾ ವಲಯಗಳಲ್ಲಿ ವೇತನ ಸಹಿತ ಮುಟ್ಟಿನ ರಜೆ ನೀತಿಯನ್ನು ಸಾಧ್ಯವಾದಷ್ಟು ಬೇಗ ಕಟ್ಟುನಿಟ್ಟಾಗಿ ಜಾರಿಗೆ ತರುವುದಾಗಿ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಔಪಚಾರಿಕವಾಗಿ ನಿಯಮ ಜಾರಿಗೆ ಬರುವವರೆಗೆ, ಮುಟ್ಟಿನ ರಜೆ ನೀತಿಯನ್ನು “ಕಟ್ಟುನಿಟ್ಟಾಗಿ ಮತ್ತು ನಿಷ್ಠೆಯಿಂದ” ಜಾರಿಗೆ ತರುವಂತೆ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ನಮ್ಮ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ನೀತಿಯಾದ ‘ಋತುಚಕ್ರ ರಜೆ ನೀತಿ’ಗೆ ಪೂರಕವಾಗಿ ಕರ್ನಾಟಕ ಉಚ್ಛ ನ್ಯಾಯಾಲಯ ನೀಡಿರುವ ನಿರ್ದೇಶನವನ್ನು ಸ್ವಾಗತಿಸುತ್ತೇನೆ. ಋತುಚಕ್ರ ರಜೆ‌ನೀತಿಯನ್ನು ಇಡೀ ದೇಶದಲ್ಲೇ ಸಮರ್ಪಕವಾಗಿ ಹಾಗೂ ಮಾದರಿಯಾಗಿ ಜಾರಿಗೆ ತರುವ ನಿಟ್ಟಿನಲ್ಲಿ ನಮ್ಮ ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇರಿಸಿದೆ.

ಘನ ನ್ಯಾಯಾಲಯದ ಅಭಿಪ್ರಾಯದಂತೆ “ಮುಟ್ಟಿನ ರಜೆಯು ಮಹಿಳೆಯರ ಘನತೆ, ನ್ಯಾಯಯುತ ಮತ್ತು ಅವರ ವಾಸ್ತವಿಕ ಬದುಕಿನ ಮಾನವೀಯ ಅರಿವು” ಎಂಬುದನ್ನು ಮೂಲ ಆಶಯವಾಗಿಟ್ಟುಕೊಂಡು ಅತಿ ಶೀಘ್ರದಲ್ಲಿ ಎಲ್ಲ ವಲಯಗಳಲ್ಲೂ ಸಹ ತಿಂಗಳಿಗೆ ಒಂದರಂತೆ ಒಟ್ಟು ವರ್ಷಕ್ಕೆ 12 ವೇತನ ಸಹಿತ ಋತುಚಕ್ರ ರಜೆ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಸಂತೋಷ್ ಲಾಡ್ ಬರೆದುಕೊಂಡಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version