Updated By: Priyalachhi

ನವದೆಹಲಿ: ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಬೇಕು ಎಂದು ರಾಜ್ಯಸಭೆ ಸದಸ್ಯೆ ಸುಧಾ ಮೂರ್ತಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ವಂದೇ ಮಾತರಂ ರಚನೆಗೆ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ ಸುಧಾ ಮೂರ್ತಿ, ವಂದೇ ಮಾತರಂ ಗೀತೆ ದೇಶವನ್ನು ಒಂದುಗೂಡಿಸುವ ಸೂತ್ರ ಎಂದು ಕರೆದರು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ರಾಷ್ಟ್ರ ಗೀತೆ ‘ವಂದೇ ಮಾತರಂ’ ಹಾಡುವುದನ್ನು ಕಡ್ಡಾಯಗೊಳಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

ನಾನು ಇಲ್ಲಿ ಸಂಸದೆಯಾಗಿ, ಲೋಕೋಪಕಾರಿ ಅಥವಾ ಲೇಖಕಿಯಾಗಿ ನಿಂತಿಲ್ಲ. ಮಂದರ್ ಇಂಡಿಯಾ ಅಥವಾ ಭಾರತ ಮಾತೆಯ ಮಗಳಾಗಿ ನಿಂತಿದ್ದೇನೆ ಎಂದು ಹೇಳಿದರು.

ಭಾರತದಲ್ಲಿರುವ ಪ್ರತಿ ರಾಜ್ಯವು ಬಣ್ಣ ಬಣ್ಣದ ತುಂಡಿನ ಬಟ್ಟೆಯಂತೆ. ಆ ಎಲ್ಲಾ ತುಂಡುಗಳನ್ನು ಒಟ್ಟಿಗೆ ಬೆಸೆಯುವ ದಾರ ಮತ್ತು ಸೂಜಿಯೇ ಈ ವಂದೇ ಮಾತರಂ ಗೀತೆ. ಇದು ಕೇವಲ ಭೂಪಟ ಅಥವಾ ಧ್ವಜವಲ್ಲ, ಇದು ಭೂಮಿಯನ್ನು ತಾಯ್ನಾಡು ಎಂದು ಪರಿಗಣಿಸುವ ಪರಿಕಲ್ಪನೆ. ಇದು ಕೇವಲ ಭೂಮಿಯ ತುಂಡಲ್ಲ, ಇದು ಮಾತೃಭೂಮಿʼ ಎಂದು ಸುಧಾ ಮೂರ್ತಿ ಅವರು ವರ್ಣಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version