• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

Sambrama Prabha News by Sambrama Prabha News
January 2, 2026
in Crime News, Politics
0
ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

Updated By: Priyalachhi 

ಬಳ್ಳಾರಿ: ನಾಳೆ ಶನಿವಾರ ಪ್ರತಿಷ್ಠಾಪನೆ ಆಗಲಿರುವ ವಾಲ್ಮೀಕಿ ಪ್ರತಿಮೆ ಕಾರ್ಯಕ್ರಮ ಸಂಬಂಧ ಬ್ಯಾನರ್‌ ಕಟ್ಟುವ ವಿಚಾರದಲ್ಲಿ ಬಳ್ಳಾರಿಯಲ್ಲಿ ಕಳೆದ ರಾತ್ರಿ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿ ಘರ್ಷಣೆ ನಡೆದು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.ಇಂದು ಪೊಲೀಸರು ಸೆಕ್ಷನ್ 144 ಜಾರಿ ಮಾಡಿದ್ದಾರೆ.

ನಿನ್ನೆ ನಡೆದ ಘಟನೆಯೇನು?

ಬ್ಯಾನರ್ ಕಟ್ಟುವ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾದ ದಾರುಣ ಘಟನೆ ನಿನ್ನೆ ಬಳ್ಳಾರಿಯಲ್ಲಿ ನಡೆಯಿತು. ಶಾಸಕ ಜನಾರ್ದನ ರೆಡ್ಡಿ ಮನೆ ಎದುರು ಈ ಘಟನೆ ನಡೆದಿದೆ. ನಾಳೆ ವಾಲ್ಮೀಕಿ ಪುತ್ತಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆ ಬಳ್ಳಾರಿ ನಗರದಾದ್ಯಂತ ಬ್ಯಾನರ್‌ಗಳನ್ನು ಅಳವಡಿಸಲಾಗುತ್ತಿದೆ. ಅದೇ ರೀತಿ, ಅವಂಬಾವಿಯ ಜನಾರ್ದನ ರೆಡ್ಡಿ ಅವರ ನಿವಾಸದೆದುರು ಬ್ಯಾನರ್ ಅಳವಡಿಸುವುದನ್ನು ಅವರ ಬೆಂಬಲಿಗರು ವಿರೋಧಿಸಿದ್ದಾರೆ. ಈ ವೇಳೆ ಜನಾರ್ದನ ರೆಡ್ಡಿ ಹಾಗೂ ಶಾಸಕಭರತ್‌ ರೆಡ್ಡಿ ಬೆಂಬಲಿಗರ ನಡುವೆ ಭೀಕರ ಸಂಘರ್ಷವೇ ನಡೆದುಹೋಗಿದೆ. ಈ ಸಂಘರ್ಷದ ನಡುವೆ ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ.

Tags: ಜನಾರ್ದನ ರೆಡ್ಡಿ
Previous Post

ಸಿಲಿಂಡರ್ ಬೆಲೆ ಹೆಚ್ಚಳ : ಕೇಂದ್ರದ ವಿರುದ್ಧ ಸಿಎಂ ಕಿಡಿ

Next Post

ಈ ಬಾರಿಯೂ ನಾನೇ ಬಜೆಟ್ ಮಂಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ

Next Post
ಈ ಬಾರಿಯೂ ನಾನೇ ಬಜೆಟ್ ಮಂಡಿಸುತ್ತೇನೆ:  ಸಿಎಂ ಸಿದ್ದರಾಮಯ್ಯ

ಈ ಬಾರಿಯೂ ನಾನೇ ಬಜೆಟ್ ಮಂಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.