• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್​ಗೆ ಬೆಂಕಿ

Sambrama Prabha News by Sambrama Prabha News
January 28, 2026
in Latest News
0
ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್​ಗೆ ಬೆಂಕಿ

Updated By: Priyalachhi

ಶಿವಮೊಗ್ಗ: ನಗರದಿಂದ‌ ಬೆಂಗಳೂರಿಗೆ ಹೊರಟಿದ್ದ ಖಾಸಗಿ ನಾನ್ ಎಸಿ ಸ್ಲೀಪರ್ ಬಸ್​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಸೂಡೂರು ಗ್ರಾಮದ ಬಳಿ ನಡೆದಿದೆ.‌ ಈ ದೃಶ್ಯ ಭಯಾನಕವಾಗಿದೆ.

ಹೊಸನಗರ ತಾಲೂಕು ಅರಸಾಳು ಬಳಿಯ 9ನೇ ಮೈಲಿಗಲ್ಲಿನ ಬಳಿ ಬಸ್​ಗೆ ಆಕಸ್ಮಿಕ ಬೆಂಕಿ ತಗುಲಿದೆ. ಈ ವೇಳೆ ಬಸ್​ನಲ್ಲಿ ಸುಮಾರು 36 ಜನ ಪ್ರಯಾಣಿಕರಿದ್ದರು‌‌. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಇದರಲ್ಲಿ 12 ಜನರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಉಳಿದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರನ್ನೂ ರಿಪ್ಪನ್​ಪೇಟೆಯ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ. ಸ್ಥಳಕ್ಕೆ ರಿಪ್ಪನ್​ಪೇಟೆ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಅನ್ನಪೂರ್ಣ ಹೆಸರಿನ ಖಾಸಗಿ ಬಸ್ ಹೊಸನಗರ ತಾಲೂಕು ನಗರದಿಂದ ಬೆಂಗಳೂರಿಗೆ ಬಸ್ ಪ್ರಯಾಣ ಬೆಳೆಸಿದೆ. ಬಸ್ ನಗರ, ಹೊಸನಗರ ಹಾಗೂ ರಿಪ್ಪನ್​ಪೇಟೆಯಲ್ಲಿ ಪ್ರಯಾಣಿಕರನ್ನು ಪಿಕ್ ಅಪ್ ಮಾಡಿಕೊಂಡು ಅರಸಾಳು ಗ್ರಾಮವನ್ನು ದಾಟಿ 9ನೇ ಮೈಲಿಗಲ್ಲು ಬಳಿ ಬರುತ್ತಿದ್ದಂತೆ ಬಸ್​ನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಬಸ್​ಗೆ ಬೆಂಕಿ ತಗುಲಿದೆ. ಇದರಿಂದ ಗಾಬರಿಯಾದ ಬಸ್ ಚಾಲಕ ಬಸ್ ಅನ್ನು ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಬಸ್ ನಿಲ್ಲಿಸಿದ್ದಾರೆ. ಬಸ್ ಪ್ರಯಾಣ ಆರಂಭಿಸಿ ಕೇವಲ‌ 30 ನಿಮಿಷವಾಗಿದೆ. ಅಲ್ಲದೆ ಪ್ರಯಾಣಿಕರು ಇನ್ನೂ ನಿದ್ದೆ ಮಾಡದ ಕಾರಣ ಬಸ್​ಗೆ ಬೆಂಕಿ ಬೀಳುತ್ತಿದ್ದಂತೆ ಬಸ್​ನಿಂದ ಎಲ್ಲರೂ ಇಳಿದು ಬಚಾವ್ ಆಗಿದ್ದಾರೆ.

ಸಮಯ ಪ್ರಜ್ಞೆ ಮೆರೆದ ಬಸ್​ ಚಾಲಕ: ಒಂದು ವೇಳೆ ಬಸ್ ಮರಕ್ಕೆ ಡಿಕ್ಕಿ ಹೊಡೆಯದೆ ಮುಂದಕ್ಕೆ ಸಾಗಿದ್ದರೆ ಸಾಕಷ್ಟು ಅನಾಹುತ ಸಂಭಿಸುವ ಸಾಧ್ಯತೆ ಇತ್ತು. ಅಲ್ಲದೆ, ಬಸ್ ಹೊರಟು ಹೆಚ್ಚಿನ ಸಮಯ ಸಹ ಆಗಿರದ ಕಾರಣ ಬಸ್​ಗೆ ಹೇಗೆ ಬೆಂಕಿ ಬಿದ್ದಿದೆ ಅನ್ನೋದರ ಬಗ್ಗೆ ತಿಳಿದುಬಂದಿಲ್ಲ. ಬಸ್ ಚಾಲಕನ ಸಮಯಪ್ರಜ್ಞೆಯಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.‌

Tags: ಬೆಂಗಳೂರಿಗೆಶಿವಮೊಗ್ಗ
Previous Post

ಶೀಘ್ರದಲ್ಲೇ ಹೊಸ ಜವಳಿ ನೀತಿ ಘೋಷಣೆ: ಸಚಿವ ಶಿವಾನಂದ ಎಸ್.ಪಾಟೀಲ್ ಭರವಸೆ

Next Post

ಮಹಾಂತೇಶ್​​ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ: ಸಿಎಂ

Next Post
ಮಹಾಂತೇಶ್​​ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ: ಸಿಎಂ

ಮಹಾಂತೇಶ್​​ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ: ಸಿಎಂ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.