ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಸಿಂಧನೂರು: ಪಕ್ಷದ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಸಹಮತ ವ್ಯಕ್ತಪಡಿಸಿದ್ದು , ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳಿವೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ತಂದೆಯವರು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಮೂರು ವರ್ಷ ಆಡಳಿತ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಮಧ್ಯೆ 6 ವಿಧಾನಸಭಾ ಉಪಚುನಾವಣೆ ನಡೆದಿದ್ದು , ಎಲ್ಲ ಕಡೆ ಕಾಂಗ್ರೆಸ್ ಗೆಲುವು ಸಾಧಿಸಿದೆ. ರಾಜ್ಯ ಸರ್ಕಾರಕ್ಕೆ ಜನರ ಸಂಪೂರ್ಣ ಬೆಂಬಲವಿದೆ ಎಂಬುದು ಸಾಬೀತಾಗಿದೆ ಎಂದರು.

ಎಸ್ಐಆರ್ ಜಾರಿಯಿಂದ ಪಶ್ಚಿಮ ಬಂಗಾಳ ಮತ್ತು ಬಿಹಾರದಲ್ಲಿ ಆದಂತೆ ಕರ್ನಾಟಕದಲ್ಲಿ ಮತದಾರರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಯಾವುದೇ ಕಾರಣಕ್ಕೂ ಸಾಮಾನ್ಯ ಮತದಾರರು ಮತದಾರರ ಪಟ್ಟಿಯಿಂದ ವಂಚಿತರಾಗದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ ಎಂದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version