Updated By: Priyalachhi

ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನವಾದ ಗುರುವಾರ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.

ದಿನೇಶ್ ಗುಂಡೂರಾವ್ ಅವರನ್ನು ಸ್ವಾಗತಿಸುವ ವೇಳೆ ಸಿಡಿಸಿದ ಪಟಾಕಿಯ ಕಿಡಿ ತಗುಲಿದ ಪರಿಣಾಮ ಬ್ಯಾನರ್ ಹೊತ್ತಿ ಉರಿದಿದೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಚಿಕ್ಕಪೇಟೆಯಲ್ಲಿ ಈ ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಕ್ರಾಂತಿ ಆಚರಣೆ ಜೊತೆಗೆ ಕಾಶಿವಿಶ್ವೇಶ್ವರ ದೇವಸ್ಥಾನ ರಸ್ತೆ ಉದ್ಘಾಟನೆ ಕೂಡ ಇತ್ತು. ಈ ವೇಳೆ ಘಟನೆ ನಡೆದಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version