• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ‘ಕೈ’ ಶಾಸಕರ ಲಾಬಿ

Sambrama Prabha News by Sambrama Prabha News
April 14, 2026
in Nation News, Politics
0
ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ‘ಕೈ’ ಶಾಸಕರ ಲಾಬಿ

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆಗಳು ಜೋರಾಗುತ್ತಿರುವ ನಡುವೆಯೇ, ರಾಜ್ಯದ 15ಕ್ಕೂ ಹೆಚ್ಚು ಶಾಸಕರ ನಿಯೋಗವು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟದಲ್ಲಿ ಬದಲಾವಣೆಗಳಾಗಲಿವೆ ಎಂಬ ಊಹಾಪೋಹಗಳು ಹರಿದಾಡುತ್ತಿರುವ ಸಮಯದಲ್ಲೇ ಈ ಭೇಟಿ ನಡೆದಿರುವುದು ಗಮನಾರ್ಹವಾಗಿದೆ.

ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳಾಗಿರುವ ಶಾಸಕರು ತಮ್ಮ ಬೇಡಿಕೆಗಳನ್ನು ನೇರವಾಗಿ ಹೈಕಮಾಂಡ್ ಗಮನಕ್ಕೆ ತರಲು ದೆಹಲಿಗೆ ಭೇಟಿ ನೀಡಿದ್ದಾರೆಂದು ಭೇಟಿಯನ್ನು ತಿಳಿದುಬಂದಿದೆ.

ಸೋಮವಾರ ಸಂಜೆ ದೆಹಲಿಯಲ್ಲಿರುವ ಖರ್ಗೆ ಅವರ ನಿವಾಸದಲ್ಲಿ ಈ ಸಭೆ ನಡೆದಿದ್ದು, ಬೆಳಿಗ್ಗೆ ಬೆಂಗಳೂರಿನಲ್ಲಿ ಇದ್ದ ಖರ್ಗೆ ಅವರು ನಂತರ ದೆಹಲಿಗೆ ತೆರಳಿ ಶಾಸಕರನ್ನು ಭೇಟಿಯಾದರು ಎಂದು ತಿಳಿದುಬಂದಿದೆ.

ಸಭೆಯ ನಂತರ ಮಾತನಾಡಿದ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು, ಖರ್ಗೆ ಅವರು ನಮ್ಮ ಮನವಿಯನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ್ದು, ಪಕ್ಷದ ಹಿತದೃಷ್ಟಿಯಿಂದ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. ಇದರಿಂದ ಸಚಿವ ಸಂಪುಟ ಪುನರ್‌ರಚನೆ ಶೀಘ್ರದಲ್ಲೇ ನಡೆಯುವ ನಿರೀಕ್ಷೆ ಮತ್ತಷ್ಟು ಬಲವಾಗುತ್ತಿದೆ.

Tags: ಸಚಿವ
Previous Post

ನಸೀರ್ ಅಹ್ಮದ್ಜ ಜವಾಬ್ದಾರಿ ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ: ಡಿ.ಕೆ ಶಿವಕುಮಾರ್

Next Post

ಹಿರಿಯ ಶಾಸಕರು ಬಹಿರಂಗವಾಗಿ ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ

Next Post
ಹಿರಿಯ ಶಾಸಕರು ಬಹಿರಂಗವಾಗಿ ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ

ಹಿರಿಯ ಶಾಸಕರು ಬಹಿರಂಗವಾಗಿ ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.