ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನರ್‌ರಚನೆ ಚರ್ಚೆಗಳು ಜೋರಾಗುತ್ತಿರುವ ನಡುವೆಯೇ, ರಾಜ್ಯದ 15ಕ್ಕೂ ಹೆಚ್ಚು ಶಾಸಕರ ನಿಯೋಗವು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟದಲ್ಲಿ ಬದಲಾವಣೆಗಳಾಗಲಿವೆ ಎಂಬ ಊಹಾಪೋಹಗಳು ಹರಿದಾಡುತ್ತಿರುವ ಸಮಯದಲ್ಲೇ ಈ ಭೇಟಿ ನಡೆದಿರುವುದು ಗಮನಾರ್ಹವಾಗಿದೆ.

ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳಾಗಿರುವ ಶಾಸಕರು ತಮ್ಮ ಬೇಡಿಕೆಗಳನ್ನು ನೇರವಾಗಿ ಹೈಕಮಾಂಡ್ ಗಮನಕ್ಕೆ ತರಲು ದೆಹಲಿಗೆ ಭೇಟಿ ನೀಡಿದ್ದಾರೆಂದು ಭೇಟಿಯನ್ನು ತಿಳಿದುಬಂದಿದೆ.

ಸೋಮವಾರ ಸಂಜೆ ದೆಹಲಿಯಲ್ಲಿರುವ ಖರ್ಗೆ ಅವರ ನಿವಾಸದಲ್ಲಿ ಈ ಸಭೆ ನಡೆದಿದ್ದು, ಬೆಳಿಗ್ಗೆ ಬೆಂಗಳೂರಿನಲ್ಲಿ ಇದ್ದ ಖರ್ಗೆ ಅವರು ನಂತರ ದೆಹಲಿಗೆ ತೆರಳಿ ಶಾಸಕರನ್ನು ಭೇಟಿಯಾದರು ಎಂದು ತಿಳಿದುಬಂದಿದೆ.

ಸಭೆಯ ನಂತರ ಮಾತನಾಡಿದ ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು, ಖರ್ಗೆ ಅವರು ನಮ್ಮ ಮನವಿಯನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ್ದು, ಪಕ್ಷದ ಹಿತದೃಷ್ಟಿಯಿಂದ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು. ಇದರಿಂದ ಸಚಿವ ಸಂಪುಟ ಪುನರ್‌ರಚನೆ ಶೀಘ್ರದಲ್ಲೇ ನಡೆಯುವ ನಿರೀಕ್ಷೆ ಮತ್ತಷ್ಟು ಬಲವಾಗುತ್ತಿದೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version