Updated By: Priyalachhi

ಬೆಂಗಳೂರು: ಕೇಂದ್ರ ಸರ್ಕಾರದ 2026-2027ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದ್ದು, ಇದರ ಬೆನ್ನಲ್ಲೇ ಈ ಬಾರಿ ಬಜೆಟ್ ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು ಕಾಂಗ್ರೆಸ್ ಆಗ್ರಹಿಸಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಈ ಬಾರಿ ಬಜೆಟ್ ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು. ನಾವು ಕೇಳುತ್ತಿರುವುದು ನಮ್ಮ ಹಕ್ಕನ್ನೇ ಹೊರತು ಭಿಕ್ಷೆಯನ್ನಲ್ಲ ಎಂದು ಹೇಳಿದೆ.

ಸಾಕು ಕೇಂದ್ರದ ಅನ್ಯಾಯ, ಬೇಕು ಕರ್ನಾಟಕಕ್ಕೆ ನ್ಯಾಯ. ಕರ್ನಾಟಕಕ್ಕೆ ವಿಶೇಷ ಯೋಜನೆಗಳಿಲ್ಲ, ಕೇಂದ್ರ ಯೋಜನೆಗಳಿಗೆ ಪೂರಕ ಅನುದಾನವಿಲ್ಲ, ತೆರಿಗೆ ಹಂಚಿಕೆಯಲ್ಲಿ ನ್ಯಾಯವಿಲ್ಲ, ಇದು ಕಳೆದ ಕೆಲವು ವರ್ಷಗಳಿಂದ ಕರ್ನಾಟಕದ ಪಾಲಿನ ಕೇಂದ್ರ ಬಜೆಟ್ಟಿನ ಚಿತ್ರಣವಾಗಿದೆ.

ಈ ಬಾರಿ ಬಜೆಟ್ ನಲ್ಲಿ ನಮಗೆ ನ್ಯಾಯಯುತ ಪಾಲು ಬೇಕೇ ಬೇಕು. ನಾವು ಕೇಳುತ್ತಿರುವುದು ನಮ್ಮ ಹಕ್ಕನ್ನೇ ಹೊರತು ಭಿಕ್ಷೆಯನ್ನಲ್ಲ ಎಂದು ತಿಳಿಸಿದೆ.

ಕೇಂದ್ರ ಸರ್ಕಾರ ಕನ್ನಡಿಗರಿಗೆ ಅಕ್ಷರಶಃ ನಾಮ ಇಡುತ್ತಿದೆ. ಇದರಲ್ಲಿ ಅನುಮಾನವೇ ಇಲ್ಲ.ರಾಜ್ಯಕ್ಕೆ ವಿಶೇಷ ಯೋಜನೆಗಳನ್ನು ಘೋಷಿಸಿಲ್ಲ ಎಂಬುದು ಒಂದೆಡೆಯಾದರೆ, ಕೇಂದ್ರ ಸರ್ಕಾರದ ಯೋಜನೆಗಳಲ್ಲೂ ಸರಿಯಾಗಿ ಅನುದಾನ ನೀಡುತ್ತಿಲ್ಲ. ಇದರಿಂದ ರಾಜ್ಯ ಸರ್ಕಾರಕ್ಕೆ 23,402 ಕೋಟಿ ರೂ. ಹೊರೆಯಾಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್ ಅವರು ಕಳೆದ ಐದು ವರ್ಷಗಳಿಂದ ಕರ್ನಾಟಕಕ್ಕೆ ದ್ರೋಹ ಬಗೆದಿದ್ದು, ಸಾಕು. ಈ ಬಾರಿ ಬಜೆಟ್ ನಲ್ಲಿಯಾದರೂ ಕರ್ನಾಟಕಕ್ಕೆ ನ್ಯಾಯ ಒದಗಿಸಲಿ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version