BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

ಸಾರಿಗೆ ನೌಕರರ ವಿಳಂಬ: ಬಡ್ಡಿ ಸಮೇತ ಪಾವತಿಸಲು NWKRTCಗೆ ಹೈಕೋರ್ಟ್‌ ಸೂಚನೆ

Author Picture
Published On: December 18, 2025

—Advertisement—

Updated By: Priyalachhi

ಬೆಂಗಳೂರು: ಸಾರಿಗೆ ನೌಕರರ ರಜೆ ನಗದೀಕರಣ (ಇಎಲ್) ಪಾವತಿಯಲ್ಲಿ ವಿಳಂಬ ಮಾಡಿದ ಪರಿಣಾಮ ಶೇ.6ರಷ್ಟು ಬಡ್ಡಿ ಸೇರಿಸಿ ಮುಂದಿನ 12 ವಾರಗಳಲ್ಲಿ ಪಾವತಿ ಮಾಡಬೇಕು ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ ಡಬ್ಲ್ಯೂಕೆಆರ್‌ಟಿಸಿ)ಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಎನ್​​ಡಬ್ಲ್ಯೂಕೆಆರ್‌ಟಿಸಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಯಲ್ಲಪ್ಪ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಅರ್ಜಿದಾರರು ನಿವೃತ್ತಿಯ ಬಳಿಕ 10 ರಿಂದ 25 ತಿಂಗಳು ಕಳೆದರೂ ಅವರಿಗೆ ಲಭ್ಯವಾಗಬೇಕಾದ ಇಎಲ್‌ ನಗದೀಕರಣ ಮಾಡುವುದಕ್ಕೆ ನಿಗಮ ಮುಂದಾಗಿಲ್ಲ. ಅಲ್ಲದೇ, ಇಎಲ್‌ ಪಾವತಿಗೆ ವಿಳಂಬವಾಗಿದ್ದರೂ, ಬಡ್ಡಿ ಪಾವತಿಸಿಲ್ಲ. ಆದ್ದರಿಂದ ಮುಂದಿನ 12 ವಾರಗಳಲ್ಲಿ ಬಡ್ಡಿಯನ್ನು ಪಾವತಿಸಬೇಕು. ಬಡ್ಡಿಯನ್ನು ಪಾವತಿಸುವಲ್ಲಿ ವಿಳಂಬ ಮಾಡಿದಲ್ಲಿ ಶೇ.9ರ ಬಡ್ಡಿ ಸೇರಿಸಿ ಪಾವತಿಸಬೇಕಾಗುತ್ತದೆ ಎಂದು ಪೀಠ ತಿಳಿಸಿದೆ.

ಅಲ್ಲದೇ, ನಿವೃತ್ತ ನೌಕರರ ಬೇಡಿಕೆಯಂತೆ ರಜೆ ನಗದೀಕರಣಕ್ಕಾಗಿ ಶೇ.9 ರಿಂದ 10 ರಷ್ಟು ಬಡ್ಡಿಯನ್ನು ಸೇರಿಸಬೇಕಾಗಿದೆ. ಆದರೆ, ಅರ್ಜಿದಾರರು ನಿವೃತ್ತರಾದ ಸಂದರ್ಭದಲ್ಲಿ ಬ್ಯಾಂಕುಗಳಲ್ಲಿ ಶೇ.5.58 ರಷ್ಟು ಬಡ್ಡಿದರವಿತ್ತು ಆದ್ದರಿಂದ ಶೇ.6 ರಷ್ಟು ಬಡ್ಡಿಯನ್ನು ಸೇರಿಸಿ ಪಾವತಿ ಮಾಡಬೇಕು ಎಂದು ನಿಗಮಕ್ಕೆ ಸೂಚನೆ ನೀಡಿರುವುದಾಗಿ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ನೌಕರರ ರಜೆ ನಗದು ಪಾವತಿಗೆ ವಿಳಂಬ ಮಾಡಿರುವುದರಿಂದ ಅದಕ್ಕೆ ಪರಿಹಾರ ಪಡೆಯುವ ಹಕ್ಕು ನೌಕರರಿಗಿದೆ. ಸಾರ್ವಜನಿಕ ನಿಧಿಯಿಂದ ಸಾರ್ವಜನಿಕ ಸಾರಿಗೆ ನಿಗಮಗಳು ಎದುರಿಸುತ್ತಿರುವ ಆರ್ಥಿಕ ವಾಸ್ತವಗಳ ನಡುವೆ ಸಮತೋಲನ ಕಾಯ್ದುಕೊಳ್ಳಬೇಕು ಎಂದು ಪೀಠ ಇದೇ ವೆಳೆ ಸಲಹೆ ನೀಡಿದೆ.

ಉಚಿತ ಪ್ರಯಾಣ ನೀತಿ ಮತ್ತಷ್ಟು ಆರ್ಥಿಕ ಸಂಕಷ್ಟ: ಸಾರಿಗೆ ನಿಗಮಗಳ ಸಂಬಂಧ ಮತ್ತು ಜವಾಬ್ದಾರಿಗಳನ್ನು ನಿರ್ವಹಿಸುವುದಕ್ಕಾಗಿ 2 ಸಾವಿರ ಕೋಟಿ ರೂ. ಸಾಲ ಪಡೆಯಬೇಕಾಗಿದೆ ಎಂದು ದಾಖಲೆಗಳಿಂದ ತಿಳಿಯಲಿದೆ. ಕೋವಿಡ್‌-19ರಿಂದ ಸಾರಿಗೆ ನಿಗಮಗಳಿಗೆ ಉಂಟಾದ ಆರ್ಥಿಕ ಸಂಕಷ್ಟ ಎರಡು ವರ್ಷಗಳ ಕಳೆದೂ ಇಂದಿಗೂ ಮುಂದುವರೆಯುತ್ತಿದೆ. 2022ರಲ್ಲಿ ನಿಗಮದ ನೌಕರರು ಕೈಗೊಂಡ ಮುಷ್ಕರವು ನಿಗಮಗಳ ಆರ್ಥಿಕೆ ಸಮಸ್ಯೆ ಹೆಚ್ಚಾಗುವುದಕ್ಕೆ ಕಾರಣವಾಯಿತು. ಅಲ್ಲದೆ, ಸರ್ಕಾರ ಘೋಷಣೆ ಮಾಡಿರುವ ಉಚಿತ ಪ್ರಯಾಣದ ನೀತಿಯೂ ನಿಗಮದ ಆರ್ಥಿಕ ಸ್ಥಿತಿಗೆ ದೊಡ್ಡ ಹೊಡೆತ ಉಂಟಾಗಲು ಕಾರಣವಾಗಿದೆ ಎಂದು ಪೀಠ ಇದೇ ವೇಳೆ ಅಭಿಪ್ರಾಯಪಟ್ಟಿದೆ.

ಪ್ರಕರಣದ ಹಿನ್ನೆಲೆ : ಅರ್ಜಿದಾರರ 1982ರಲ್ಲಿ ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿಗೆ ಕಂಡಕ್ಟರ್‌ ಆಗಿ ನೇಮಕಗೊಂಡಿದ್ದರು. 2020ರಲ್ಲಿ ನಿವೃತ್ತಿ ಹೊಂದಿದ್ದರು. ಈ ವೇಳೆ ಅರ್ಜಿದಾರರಿಗೆ ರಜೆ ನಗದೀಕರಣವನ್ನು ಹೊರತುಪಡಿಸಿ, ಇನ್ನುಳಿದ ಎಲ್ಲ ಸೌಲಭ್ಯಗಳನ್ನು ನೀಡಲಾಗಿತ್ತು. ನಿವೃತ್ತಿಯ ಬಳಿಕ ರಜೆ ನಗದೀಕರಣ ವಿಳಂಬ ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp