Updated By: Priyalachhi

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳ ನಡುವೆ ರಾಷ್ಟ್ರ ರಾಜಧಾನಿಯಲ್ಲಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ ಬುಧವಾರ ಮಾತನಾಡಿದ್ದಾರೆ.

ಸಿಎಂ ಬದಲಾವಣೆ ವದಂತಿಯನ್ನು ಅವರು ತಳ್ಳಿ ಹಾಕಿದ್ದು, ಮುಖ್ಯಮಂತ್ರಿ ಕುರ್ಚಿಗಾಗಿ ವಿವಾದವೇನೂ ಇಲ್ಲ. ಉಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ನನಗೆ ತೃಪ್ತಿ ಇದೆ ಎಂದಿದ್ದಾರೆ.

ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಕುಮಾರ್, ಆಂತರಿಕ ಭಿನ್ನಾಭಿಪ್ರಾಯಗಳು ಅಥವಾ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಸಭೆ ಎಂಬಿತ್ಯಾದಿ ವದಂತಿಗಳು ಮಾಧ್ಯಮಗಳಲ್ಲಿ ಮಾತ್ರ ಬರುತ್ತಿದೆ. ನಾನು ಯಾವುದೇ ಎಐಸಿಸಿ ವರಿಷ್ಠರನ್ನೂ ಭೇಟಿ ಮಾಡುತ್ತಿಲ್ಲ. ಉಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ನನಗೆ ಸಂತೋಷವಿದೆ.

ಪಕ್ಷದ ಕಾರ್ಯಕರ್ತನಾಗಿರಲು ಇಷ್ಟಪಡುತ್ತೇನೆ ಎಂದು ಹೇಳುವ ಮೂಲಕ ರಾಜ್ಯದಲ್ಲಿನ ಮುಖ್ಯಮಂತ್ರಿ ಬದಲಾವಣೆ ಅಥವಾ ಸಂಭಾವ್ಯ ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಪ್ರಶ್ನೆಗಳಿಗೆ ತೆರೆ ಎಳೆದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version