Updated By: Priyalachhi

ಬೆಂಗಳೂರು: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳಲಿದ್ದಾರೆ.

ಡಿ.27 ರಂದು ದೆಹಲಿಯ ಇಂದಿರಾ ಭವನದಲ್ಲಿ ಸಿಡಬ್ಲ್ಯೂಸಿ ಸಭೆ ಅಯೋಜನೆಗೊಂಡಿದೆ. ಈ ಸಭೆಯಲ್ಲಿ ಭಾಗಿಯಾಗುವಂತೆ ಕಾಂಗ್ರೆಸ್‌ ಅಧಿಕಾರದಲ್ಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ತೆಲಂಗಾಣದ ರೇವಂತ್‌ ರೆಡ್ಡಿ, ಹಿಮಾಚಲ ಪ್ರದೇಶದ ಸುಖ್ವಿಂದರ್ ಸಿಂಗ್ ಸುಖು ಭಾಗಿಯಾಗಲಿದ್ದಾರೆ. ಕರ್ನಾಟಕದ ಸಿಡಬ್ಲ್ಯುಸಿ ಸದಸ್ಯರಾದ ಬಿ.ಕೆ ಹರಿಪ್ರಸಾದ್, ನಾಸೀರ್ ಹುಸೇನ್ ಹಾಗೂ ವೀರಪ್ಪ ಮೊಯ್ಲಿ ಪಾಲ್ಗೊಳ್ಳಲಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version