Updated By: Priyalachhi

ಕನಕಪುರ: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರೇ ಶೂಟ್ ಮಾಡಿಕೊಂಡ್ರಾ ಅಥವಾ ಶೂಟ್ ಮಾಡಿದ್ರಾ? ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೀಪ್ ಈಶ್ವರ್, ಐಟಿ ಅಧಿಕಾರಿಗಳ ಮೇಲೆ ಬೊಟ್ಟು ಮಾಡಿದರು. ಶೂಟೌಟ್ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ

ಅಧಿಕಾರಿಗಳನ್ನು ಬಿಟ್ಟರೆ ಬೇರೆ ಯಾರು ಇರಲಿಲ್ಲ. ಅಲ್ಲದೇ ಯಾವುದೇ ಸಿಸಿಟಿವಿ ಕ್ಯಾಮರಾಗಳಲ್ಲಿ ಶೂಟೌಟ್ ದೃಶ್ಯಾವಳಿಗಳು ಸೆರೆಯಾಗಿಲ್ಲ. ಹೀಗಾಗಿ ಸಿಜೆ ರಾಯ್ ಅವರೇ ಶೂಟ್ ಮಾಡಿಕೊಂಡ್ರಾ ಅಥವಾ ಬೇರೆ ಯಾರಾದರೂ ಶೂಟ್ ಮಾಡಿದ್ರಾ ಎಂಬುದರ ಬಗ್ಗೆ ಅನುಮಾನವಿದೆ ಎಂದರು.

ಕೇರಳ ಚುನಾವಣೆಗೆ ಬಿಜೆಪಿಯವರು ಸಿಜೆ ರಾಯ್ ಅವರಿಂದ ನೂರಾರು ಕೋಟಿ ರೂ. ದುಡ್ಡು ಕೇಳಿದ್ರು, ಈ ವಿಚಾರವಾಗಿ ಟಾರ್ಗೆಟ್ ಮಾಡಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತನಿಖೆಗೆ ಒಳಪಡಿಸಿದ್ದಾರೆ. ಈ ಪ್ರಕರಣವನ್ನು ಎಸ್ ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಪ್ರದೀಪ್ ಈಶ್ವರ್ ಒತ್ತಾಯಿಸಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version