BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಸಿದ್ದರಾಮಯ್ಯ ಅಂದರೆ 2013-2018 ರ ಅವಧಿಯಲ್ಲಿದ್ದ ಸಿದ್ದರಾಮಯ್ಯ ಈಗ ಇಲ್ಲ

Author Picture
Published On: April 28, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಸ್ತಾಂತರದ ಬಗ್ಗೆ ಚರ್ಚೆಗಳು ಜೋರಾಗುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಆಪ್ತ ವಲಯದಲ್ಲಿರುವ ಮಾಜಿ ಸಚಿವ ಕೆಎನ್ ರಾಜಣ್ಣ ನೀಡಿರುವ ಹೇಳಿಕೆ ಮತ್ತಷ್ಟು ಕುತೂಹಲ ಮೂಡಿಸಿದೆ.

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಅಚ್ಚರಿಯ ಹೇಳಿಕೆಗಳನ್ನ ನೀಡಿರುವ ಕೆಎನ್ ರಾಜಣ್ಣ, ಈ ಹಿಂದೆ ಇದ್ದ ಸಿದ್ದರಾಮಯ್ಯ ಅಂದರೆ 2013-2018 ರ ಅವಧಿಯಲ್ಲಿದ್ದ ಸಿದ್ದರಾಮಯ್ಯ ಈಗ ಇಲ್ಲ. ಈಗ ಸಿದ್ದರಾಮಯ್ಯ ರಾಹುಲ್ ಗಾಂಧಿ ಹೇಳಿದಂತೆ ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಚಿವ ರಾಜಣ್ಣ ಈ ಹಿಂದೆ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದು, ಯಾರೋ ಮಾಟ-ಮಂತ್ರ ಮಾಡಿಸಿರಬೇಕು ಎಂದು ಹೇಳುವ ಮೂಲಕ ಸುದ್ದಿಯಾಗಿದ್ದರು. ಈಗ ಸಿದ್ದರಾಮಯ್ಯ ಈ ಹಿಂದೆ ಇದ್ದಂತೆ ಇಲ್ಲ. ಸಿಎಂ ಕುರ್ಚಿ ಬಿಡೋಕು ಸಿದ್ದರಾಮಯ್ಯ ರೆಡಿಯಾಗಿದ್ದಾರೆ ಎನ್ನುವ ಅಚ್ಚರಿಯ ಕೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತಾಡಿದ ಶಾಸಕ ಕೆ ಎನ್ ರಾಜಣ್ಣ, ನಾಯಕತ್ವ ಬದಲಾವಣೆ ವಿಚಾರದಲ್ಲಿ ಗೊಂದಲ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರೆಯೋಕು ಸಿದ್ಧರಾಗಿದ್ದು, ಅಧಿಕಾರ ಬಿಟ್ಟು ಕೊಡಲು ಕೂಡ ರೆಡಿಯಾಗಿದ್ದಾರೆ ಎಂಬ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಅಧಿಕಾರ ಬದಲಾವಣೆಯ ವಿಷಯವಾಗಿ ಗೊಂದಲ ಮುಂದುವರಿಯಲು ಹೈಕಮಾಂಡ್ ಅವಕಾಶ ನೀಡಬಾರದು ಎಂದು ಆಗ್ರಹಿಸಿರುವ ರಾಜಣ್ಣ, ಹೈಕಮಾಂಡ್ ಏನು ಹೇಳುತ್ತದೆಯೋ ಅದಕ್ಕೆ ಸಿದ್ದರಾಮಯ್ಯ ಬದ್ದರಾಗಿದ್ದಾರೆ. ಇದು ಆತುರದಲ್ಲಿ ತೆಗೆದುಕೊಳ್ಳುವ ನಿರ್ಧಾರ ಅಲ್ಲ ಪಕ್ಷ ಹಾಗೂ ರಾಜ್ಯದ ಜನತೆಯ ಭವಿಷ್ಯವೇ ಇದರಲ್ಲಿದೆ ಎಂದು ಹೇಳಿದ್ದಾರೆ.

ಸೂಕ್ತ ನಿರ್ಧಾರದ ನಿರೀಕ್ಷೆ

ಹೀಗಾಗಿ ಹೈಕಮಾಂಡ್ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ. ರಾಹುಲ್ ಗಾಂಧಿ ಹೇಳಿದ್ದನ್ನು ಪಾಲನೆ ಮಾಡುತ್ತೇನೆ, ಆಗಲೂ ನಿಮ್ಮೆಲ್ಲರ ಸಹಕಾರ ಇರಬೇಕು ಎಂದು ಸಿಎಂ ಹೇಳಿದ್ದಾರೆ. ರಾಹುಲ್ ಗಾಂಧಿ ಏನು ತೀರ್ಮಾನ ಕೊಡ್ತಾರೆ ಅದರಂತೆ ನಡೆಯೋಣ ಎಂಬ ನಿರ್ಧಾರಕ್ಕೆ ಸಿದ್ದರಾಮಯ್ಯ ಬಂದಿದ್ದಾರೆ ಎಂದು ರಾಜಣ್ಣ ತಿಳಿಸಿದ್ದಾರೆ.

ಅಧಿಕಾರ ಶಾಶ್ವತವಲ್ಲ, ಅಧಿಕಾರ ಕಳೆದುಕೊಂಡವರು ಮತ್ತೆ ಗಳಿಸ್ತಾರೆ. ರಾಹುಲ್ ನಿರ್ದೇಶನದಂತೆ ಹೋಗಬೇಕು ಎನ್ನುವುದು ಮುಖ್ಯಮಂತ್ರಿಗಳ ಮನಸ್ಥಿತಿಯಾಗಿದೆ. ಆದರೆ ಸಿದ್ದರಾಮಯ್ಯ ಅವರೇ ಮುಂದುವರೆಯಬೇಕು ಅನ್ನೋದು ನಮ್ಮ ಅಭಿಪ್ರಾಯ. ಇದನ್ನೇ ನಾವೆಲ್ಲಾ ಹೈಕಮಾಂಡ್​​ಗೂ ಹೇಳಿದ್ದೇವೆ ಎಂದು ರಾಜಣ್ಣ ತಿಳಿಸಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp