Updated By: Priyalachhi

ಬೆಂಗಳೂರು: ಮುಖ್ಯಮಂತ್ರಿ ಕುರ್ಚಿ ಗುದ್ದಾಟ ವಿಚಾರ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಮುಖ್ಯಮಂತ್ರಿ ಉತ್ತರ ನೀಡುವಾಗ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪಿಸಿದರು.

ಕಳೆದ ಒಂದು ತಿಂಗಳಿಂದ ಡಿ.ಕೆ. ಶಿವಕುಮಾರ್ ಅವರ ಮಾತು, ಟ್ವೀಟ್ ಗಳು ನೂರು ಅರ್ಥ ಬರುವಂತಿದ್ದು, ಎಲ್ಲರೂ ಗೊಂದಲಕ್ಕೆ ಒಳಗಾಗಿದ್ದಾರೆ. ಆ ಸಂದರ್ಭ ಯಾವಾಗ ಬರುತ್ತದೆ ಎಂಬುದನ್ನು ಸ್ಪಷ್ಪಪಡಿಸಬೇಕು ಎಂದರು.

ಈ ಮಾತನಿಗೆ ಉತ್ತರಿಸಿದ ಡಿಕೆ ಶಿವಕುಮಾರ್, ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. ಇಲ್ಲಿ ಎಲ್ಲವೂ ಸಾಧ್ಯ. One man with Courage makes a majority ಎಂಬುದನ್ನು ನಾನು ನಂಬಿದ್ದೇನೆ. ದೃಢವಾದ ನಿಲುವು, ಸಂಕಲ್ಪ ಹೊಂದಿದ್ದರೆ, ಒಬ್ಬನೇ ಸಾಕು. ಆತನ ಜೊತೆ 140 ಜನರೂ ಇರುತ್ತಾರೆ, ಇನ್ನೂ ಜಾಸ್ತಿನೂ ಆಗುತ್ತಾರೆ. ನೋಡೋಣ 2028ರಲ್ಲಿ ಏನಾಗುತ್ತದೆ ಎಂದರು.

“ಅಶೋಕ್ ಅವರೇ, ನೀವು ಹಿರಿಯ ರಾಜಕಾರಣಿ. ಯಾರು ಏನಾದರೂ ಮಾತನಾಡಲಿ, ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಾನು ವಿದ್ಯಾರ್ಥಿ ನಾಯಕನಿಂದ ಬೆಳೆದು ಬಂದವನು. ನನ್ನದೇ ಆದ ಮೌಲ್ಯಗಳನ್ನು ಪಾಲಿಸಿಕೊಂಡು, ಉಳಿಸಿಕೊಂಡು ಬಂದಿದ್ದೇನೆ. ಪಕ್ಷ ನನಗೆ ಚಿಕ್ಕ ವಯಸ್ಸಿಗೆ ಟಿಕೆಟ್ ಕೊಟ್ಟಿದ್ದು, ಇಲ್ಲಿಯವರೆಗೂ ಬೆಳೆದಿದ್ದೇನೆ. ರಾಜಕೀಯದಲ್ಲಿ ಏಳು ಬೀಳು ಸಹಜ. ನಾನು ಎಂತೆಂಥಹವರ ಏಳು ಬೀಳು ನೋಡಿದ್ದೇನೆ. ನಾನು ಬಿದ್ದಿದ್ದೇನೆ, ಎದ್ದಿದ್ದೇನೆ, ಜೈಲುವಾಸ ಎಲ್ಲವನ್ನೂ ಅನುಭವಿಸಿದ್ದೇನೆ. ಇನ್ನು ಒಂದು ತಿಂಗಳು ಕಳೆದರೆ ನಾನು ಪಕ್ಷದ ಅಧ್ಯಕ್ಷನಾಗಿ ಆರು ವರ್ಷ ಪೂರ್ಣಗೊಳ್ಳುತ್ತದೆ ಎಂದು ಹೇಳಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version