Updated By: Priyalachhi 

ಬೆಂಗಳೂರು: ”ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನಿಗದಿತ ದಿನಾಂಕದ ಒಳಗೆ ಜಿಬಿಎ ಪಾಲಿಕೆಗಳ ಚುನಾವಣೆ ನಡೆಸಲಾಗುವುದು. ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲಾಗುವುದು” ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಜಿಬಿಎ ಪಾಲಿಕೆಗಳ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ಗಡುವು ನೀಡಿರುವ ಬಗ್ಗೆ ಅರಮನೆ ಮೈದಾನ ಆವರಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ರಾಜ್ಯ ಚುನಾವಣಾ ಆಯೋಗವು ನ್ಯಾಯಾಲಯದ ಮುಂದೆ ಅಫಿಡವಿಟ್ ಸಲ್ಲಿಸಿದ್ದು, ಅದು ಅವರಿಗೆ ಬಿಟ್ಟ ವಿಚಾರ. ಸರ್ಕಾರ ಎಲ್ಲಾ ರೀತಿಯ ಆದೇಶ ನೀಡಲಿದೆ. ನಮಗೆ ಜಿಲ್ಲಾ ಹಾಗೂ ತಾಲೂಕು ಪಂಚಾಯತ್​ ಚುನಾವಣೆಗಳು ನಡೆಯಬೇಕು. ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ಅನುಸಾರ ಏನೆಲ್ಲಾ ತೀರ್ಮಾನ ಮಾಡಬೇಕೋ ಅದನ್ನು ಮಾಡಲಿದೆ ಎಂದು ತಿಳಿಸಿದರು.

ತಾಂತ್ರಿಕ ಆಕ್ಷೇಪಣೆಗಳ ಬಗ್ಗೆ ಪ್ರತಿಕ್ರಿಯಿಸಿ, ”ಕೆಲವರು ಆಕ್ಷೇಪಣೆ ಸಲ್ಲಿಸುತ್ತಾರೆ. ಅದಕ್ಕೆ ಸಮಿತಿ ರಚಿಸಲಾಗಿದ್ದು, ಅದು ತೀರ್ಮಾನ ಮಾಡಲಿದೆ. ರಾಜ್ಯ ಚುನಾವಣಾ ಆಯೋಗ ಚುನಾವಣೆ ನಡೆಸಲಿದ್ದು, ಅವರಿಗೆ ಏನು ನಿರ್ದೇಶನ ನೀಡಬೇಕೋ ನೀಡುತ್ತೇವೆ. ಮೀಸಲಾತಿ ವಿಚಾರವಾಗಿ ಮಹಿಳೆಯರಿಗೆ ಕಡಿಮೆಯಾಗಿದೆ ಎಂಬ ಮಾತುಗಳು ಕೇಳಿಬಂದಿವೆ. ಇದನ್ನು ನಾನು ಗಮನಿಸಿಲ್ಲ. ಇದನ್ನು ಪರಿಶೀಲಿಸಿ ತಪ್ಪಾಗಿದ್ದರೆ ಸರಿಪಡಿಸಲು ಅವರಿಗೆ ಸೂಚಿಸಲಾಗುವುದು. ನಾವು ಯಾವುದರಲ್ಲೂ ಹಸ್ತಕ್ಷೇಪ ಮಾಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು.
Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version