Updated By: Priyalachhi

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಚರ್ಚೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಅಧಿವೇಶನ ಮುಗಿದ ಬಳಿಕ ಮತ್ತೆ ಕುರ್ಚಿ ಕಿಚ್ಚು ಭುಗಿಲೇಳು ಸಾಧ್ಯತೆ ಇದೆ. ಅಷ್ಟರಲ್ಲಿ ಕಿತ್ತಾಟಕ್ಕೆ ಮದ್ದರೆಯಲು ಹೈಕಮಾಂಡ್ ಯೋಜನೆ ಹಾಕಿಕೊಳ್ಳುತ್ತಿದೆ. ಸದ್ಯಕ್ಕೆ ಬೀಸುವ ದೊಣ್ಣೆಯಿಂದ ಹೈಕಮಾಂಡ್ ಪಾರಾಗಿದ್ದು, ಇದೇ ವಾರದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ರನ್ನು ದೆಹಲಿಗೆ ಕರೆಸಿ ಮಾತಾಡುವ ಸಾಧ್ಯತೆ ಇದೆ. ಈಮಧ್ಯೆ ದೆಹಲಿಯಲ್ಲಿ ಸೋನಿಯಾ ಗಾಂಧಿ ನಿವಾಸದಲ್ಲಿ ಭಾನುವಾರ ಮಹತ್ವದ ಸಭೆ ನಡೆದಿದೆ. ಕಾಂಗ್ರೆಸ್ ಸಂಸದೀಯ ಸಭೆ ಬಳಿಕ ಸೋನಿಯಾ ಜೊತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೆಲ ಹೊತ್ತು ರಾಜ್ಯ ವಿದ್ಯಾಮಾನಗಳ ಬಗ್ಗೆ ಚರ್ಚಿಸಿದ್ದಾರೆ. ಸೋನಿಯಾಗೆ ವರದಿ ನೀಡಿರುವ ಮಲ್ಲಿಕಾರ್ಜುನ ಖರ್ಗೆ, ಗೊಂದಲಕ್ಕೆ ತೆರೆ ಎಳೆಯುವಂತೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ವಿಚಾರವಾಗಿ ಎರಡ್ಮೂರು ನಿಮಿಷಗಳ ಕಾಲ ಖೆರ್ಗೆ ಹಾಗೂ ಸೋನಿಯಾ ಚರ್ಚಿಸಿದ್ದಾರೆ. ಸೋನಿಯಾಗೆ ವರದಿ ನೀಡಿರುವ ಮಲ್ಲಿಕಾರ್ಜುನ ಖರ್ಗೆ, ಸದ್ಯ ಗೊಂದಲಕ್ಕೆ ತೆರೆ ಎಳೆಯುವಂತೆ ಮನವಿ ಮಾಡಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version