Updated By: Priyalachhi

ಬೆಂಗಳೂರು: ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಕೆಲ ಪ್ರಮುಖರ ವಿರುದ್ಧ ದಾಖಲಾಗಿದ್ದ ಖಾಸಗಿ ದೂರುಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.

ಬಿಜೆಪಿ ನಾಯಕರು ದಾಖಲಿಸಿದ್ದ ಪ್ರಕರಣ ರದ್ದುಪಡಿಸಿ ನ್ಯಾ.ಎಂ.ಐ.ಅರುಣ್ ಅವರಿದ್ದ ಹೈಕೋರ್ಟ್ ಪೀಠ ಆದೇಶಿಸಿದೆ. ಆ ಮೂಲಕ ಅಧಿಕಾರಿಗಳಾದ ಗೌರವ್ ಗುಪ್ತಾ, ಮಹಾಂತೇಶ ಬೀಳಗಿ, ಹೆಚ್.ಜೆ.ರಮೇಶ್ ವಿರುದ್ಧದ ಕೇಸ್ ಕೂಡ ರದ್ದಾಗಿದೆ.

ಸ್ಮಾರ್ಟ್ ವಿದ್ಯುತ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಸ್ಮಾರ್ಟ್ ಮೀಟರ್ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಇತರೆ ಕಂಪೆನಿಗಳನ್ನು ಕೈಬಿಟ್ಟು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್​ಗೆ ಗುತ್ತಿಗೆ ನೀಡಲಾಗಿದೆ.

ಈ ಕಂಪೆನಿಗಾಗಿ ಇತರೆ ಕಂಪೆನಿಗಳು ಟೆಂಡರ್​ನಲ್ಲಿ ಭಾಗವಹಿಸದಂತೆ ನೋಡಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಬೇರೆ ರಾಜ್ಯಗಳಲ್ಲಿ 900 ರೂಪಾಯಿಗಳಿಗೆ ಸಿಗುವ ಸ್ಮಾರ್ಟ್ ಮೀಟರ್ ಅನ್ನು 5 ಸಾವಿರದಿಂದ 10 ಸಾವಿರ ರೂಪಾಯಿಗಳಿಗೆ ಗ್ರಾಹಕರಿಗೆ ನೀಡಲಾಗುತ್ತಿದೆ. ಹೀಗಾಗಿ ಇದೊಂದು ದೊಡ್ಡ ಹಗರಣ ಎಂದು ಆರೋಪಿಸಲಾಗಿತ್ತು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version