BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತಿಲ್ಲ: ಡಾ ಯತೀಂದ್ರ

Author Picture
Published On: February 7, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೀದರ್: ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ನಿನ್ನೆ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಹೇಳಿಲ್ಲ, ಹಾಗಾಗಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ನಾನು ಹೇಳಿದ್ದು ಎಂದು ಡಾ ಯತೀಂದ್ರ ಸಿದ್ದರಾಮಯ್ಯ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಿನ್ನೆ ಮೈಸೂರಿನಲ್ಲಿ ಮಾತನಾಡುವ ವೇಳೆ ಹೈಕಮಾಂಡ್ ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತಿಲ್ಲ, ತಂದೆಯರೇ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ನಾನು ಅಂದುಕೊಳ್ಳುತ್ತೇನೆ ಎಂದಿದ್ದರು. ಅದಕ್ಕೆ ಡಿ ಕೆ ಶಿವಕುಮಾರ್ ಯತೀಂದ್ರ ಅವರು ಹೇಳಿದ ಮೇಲೆ ಮುಗೀತು, ಅವರೇ ಹೈಕಮಾಂಡ್ ಎಂದು ಭಾವಿಸೋಣ ಎಂದಿದ್ದರು.

ಈ ಬಗ್ಗೆ ಇಂದು ಬೀದರ್ ನಲ್ಲಿ ಸುದ್ದಿಗಾರರು ಕೇಳಿದಾಗ, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ. ಎಲ್ಲಾ ಪಕ್ಷಗಳಲ್ಲಿಯೂ ಮುಖ್ಯಮಂತ್ರಿ ಆಕಾಂಕ್ಷಿಗಳು ಇರುತ್ತಾರೆ. ನಿಜವಾದ ಅರ್ಹತೆ ಇರುವವರು ಸಹ ಕೇಳುತ್ತಿರುತ್ತಾರೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ, ನಮ್ಮ ಪಕ್ಷದಲ್ಲೇನೂ ಹೊಸ ವಿಚಾರವಲ್ಲ, ಹೈಕಮಾಂಡ್ ಸದ್ಯಕ್ಕೆ ಏನೂ ಹೇಳಿಲ್ಲ,ಹೀಗಾಗಿ ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ ಎಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp