ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಮೈಸೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪಕ್ಷದ ಹೈಕಮಾಂಡ್ ಸುಮ್ಮನಿದೆ ಎಂದರೆ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದರ್ಥ ಎಂದು ಗೃಹ ಸಚಿವ ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ವರದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ನಮ್ಮ ತಂದೆಯೇ 5 ವರ್ಷ ಸಿಎಂ ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ವೈಯಕ್ತಿಕ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದೇ ಅಂತಿಮ ಎಂದರು.

ಸದ್ಯಕ್ಕೆ ಹೈ ಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಸಿಎಂ ಬದಲಾವಣೆ ವಿಚಾರ ಕೇವಲ ಮಾಧ್ಯಮಗಳಲ್ಲಿನ ಗೊಂದಲ ಅಷ್ಟೇ. ಗೊಂದಲ ಇದ್ರೆ ಸಿಎಲ್​ಪಿ ಸಭೆಯಲ್ಲಿ ಗೊತ್ತಾಗುತ್ತಿತ್ತು. ಮೊನ್ನೆ ನಡೆದ ಸಭೆಯಲ್ಲೂ ಯಾರೂ ಏನೂ ಹೇಳಿಲ್ಲ. ನಮ್ಮಲ್ಲಿ ಯಾವ ಗೊಂದಲವೂ ಇಲ್ಲ. ಸಿಎಂ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ ಎಂದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version