BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

ಹೈಟೆಕ್ 2 ನ್ಯಾನೋಮೀಟರ್ ಚಿಪ್ ಅನಾವರಣಗೊಳಿಸಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

Author Picture
Published On: February 7, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ನಗರದ ಕ್ವಾಲ್ ಕ್ಯಾಮ್ ಕಂಪನಿ ತಯಾರಿಸಿದ ಅತ್ಯಾಧುನಿಕ 2- ನ್ಯಾನೋ ಮೀಟರ್ ಚಿಪ್ ಅನ್ನು ಕೇಂದ್ರದ ಎಲೆಕ್ಟ್ರಾನಿಕ್ಸ್ ಹಾಗೂ ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಶನಿವಾರ ನಗರದಲ್ಲಿ ಅನಾವರಣಗೊಳಿಸಿದರು.

ತಂತ್ರಜ್ಞಾನ ಕ್ಷೇತ್ರದಲ್ಲಿ ಸೆಮಿಕಂಡಕ್ಟರ್​ನ ಪಾತ್ರ ಗಣನೀಯವಾಗಿದ್ದು, ಈ ದಿಸೆಯಲ್ಲಿ ಕಂಪನಿ ತಯಾರಿಸಿದ ಸುಧಾರಿತ ಚಿಪ್ ಇದಾಗಿದೆ. ಇದು ಸಿಪಿಯು ಹಾಗೂ ಜಿಪಿಯು ಸಂಯೋಜಿತವಾಗಿದ್ದು, 20 ರಿಂದ 30 ಬಿಲಿಯನ್ ಟ್ರ್ಯಾನಿಸ್ಟರ್​ಗಳನ್ನು ಹೊಂದಿದೆ. ಕಂಪ್ಯೂಟರ್, ಕ್ಯಾಮರಾ, ವೈಫೈ ರೂಟರ್, ವಿಮಾನ ಹಾಗೂ ಕಾರುಗಳಲ್ಲಿ ಇದನ್ನು ಬಳಸಬಹುದಾಗಿದೆ‌. ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಆಧಾರದ ಮೇರೆಗೆ ಇದು ಕಾರ್ಯನಿರ್ವಹಿಸಲಿದೆ.

UNION MINISTER ASHWINI VAISHNAW  SEMICON ROADMAP  ಹೈಟೆಕ್ 2 ನ್ಯಾನೋಮೀಟರ್ ಚಿಪ್  BENGALURU NANOMETRE QUALCOMM CHIP

ಅತ್ಯಾಧುನಿಕ ಚಿಪ್ ಅನಾವರಣಗೊಳಿಸಿ ಮಾತನಾಡಿದ ಸಚಿವರು, ಸುಧಾರಿತ ಸೆಮಿಕಂಡಕ್ಟರ್ ತಂತ್ರಜ್ಞಾನದ ವಿನ್ಯಾಸದಲ್ಲಿ ಭಾರತವು ಈಗ ಜಾಗತಿಕ ಕೇಂದ್ರವಾಗುತ್ತಿದೆ. ಕ್ವಾಲ್​ ಕ್ಯಾಮ್‌ನ ಈ ಮೈಲಿಗಲ್ಲು ಭಾರತದ ವಿನ್ಯಾಸ ಪರಿಸರ ವ್ಯವಸ್ಥೆಯು ಎಷ್ಟು ಬೆಳೆದಿದೆ ಎಂಬುದಕ್ಕೆ ಸಾಕ್ಷಿ ಎಂದರು.

2nm ಚಿಪ್‌ಗಳು ಮುಂದಿನ ಪೀಳಿಗೆಯ ವೈರ್‌ಲೆಸ್ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಕಂಪ್ಯೂಟಿಂಗ್ ಕ್ಷೇತ್ರದಲ್ಲಿ ಕ್ರಾಂತಿ ಮಾಡಲಿವೆ. ಭಾರತವು ಕೇವಲ ಚಿಪ್‌ಗಳನ್ನು ಬಳಸುವ ದೇಶವಾಗಿರದೆ, ಅವುಗಳನ್ನು ವಿನ್ಯಾಸಗೊಳಿಸುವ ಶಕ್ತಿಯಾಗಿ ಹೊರಹೊಮ್ಮುತ್ತಿರುವುದನ್ನು ಈ ಬೆಳವಣಿಗೆ ಸೂಚಿಸುತ್ತಿದೆ ಎಂದು ತಿಳಿಸಿದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp